ರಾತ್ರಿ ಕರ್ಫ್ಯೂ ಕಟ್ಟುನಿಟ್ಟಿನ ಜಾರಿ

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಟಿ.ರಂಗಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿ, ಸರ್ಕಾರದ ಕ್ರಮ ಸಾರ್ವಜನಿಕರ ಆರೋಗ್ಯ ಹಾಗೂ ಒಳತಿಗಾಗಿಯೇ ಇದೆಯೇ ಹೊರತು. ತೊಂದರೆ ನೀಡುವ ಸಲುವಾಗಿ ಅಲ್ಲ. ಇದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ಪೊಲೀಸರು ರಾತ್ರಿ ವೇಳೆ ಕಟ್ಟುನಿಟ್ಟಿನ ಗಸ್ತು ನಡೆಸಲಿದ್ದಾರೆ. ಕರ್ಫ್ಯೂ ಸಂದರ್ಭದಲ್ಲಿ ಅನವಶ್ಯಕವಾಗಿ ಸಂಚರಿಸದೆ ಸಹಕರಿಸಬೇಕು. ತುರ್ತು ಸೇವೆಗಳಿಗೆ ಸರ್ಕಾರ ವಿನಾಯಿತಿ ಪ್ರಕಟಿಸಿದೆ. ಮಾಧ್ಯಮಗಳ ಮೂಲಕ ಪ್ರಕಟವಾಗುವ ಸರ್ಕಾರದ ಮಾರ್ಗದರ್ಶಿ ಸೂಚನೆ ತಿಳಿದುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಸ್ವದೇಶಕ್ಕೆ ಮರಳಿದ 3 ಜನ: ಲಂಡನ್ನಲ್ಲಿ ಕೊರೊನಾ ಹೊಸ ರೂಪಾಂತರ ಪಡೆದುಕೊಂಡಿರುವ ಬಗ್ಗೆ ವರದಿಗಳ ಬಂದ ನಂತರ ವಿದೇಶದಿಂದ ಬರುತ್ತಿರುವ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಧರ್ಮೇಂದ್ರೆ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮೂರು ಜನ ಬಂದಿದ್ದಾರೆ. ಮೂರು ಜನರು ಸಹ ಆರೋಗ್ಯವಾಗಿದ್ದಾರೆ. ಕೊರೊನಾ ನೆಗಟಿವ್ ವರದಿ ಬಂದಿದೆ. ಹೋಂ ಐಸುಲೇಷನ್ನಲ್ಲಿ ಇದ್ದಾರೆ. ಇವರ ಆರೋಗ್ಯದ ಮೇಲೆ ನಿಗಾವಹಿಸಲಾಗುತ್ತಿದೆ ಎಂದಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.