ಈ ಕುರಿತು ಮಾಹಿತಿ ನೀಡಿ, ಸರ್ಕಾರದ ಕ್ರಮ ಸಾರ್ವಜನಿಕರ ಆರೋಗ್ಯ ಹಾಗೂ ಒಳತಿಗಾಗಿಯೇ ಇದೆಯೇ ಹೊರತು. ತೊಂದರೆ ನೀಡುವ ಸಲುವಾಗಿ ಅಲ್ಲ. ಇದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ಪೊಲೀಸರು ರಾತ್ರಿ ವೇಳೆ ಕಟ್ಟುನಿಟ್ಟಿನ ಗಸ್ತು ನಡೆಸಲಿದ್ದಾರೆ. ಕರ್ಫ್ಯೂ ಸಂದರ್ಭದಲ್ಲಿ ಅನವಶ್ಯಕವಾಗಿ ಸಂಚರಿಸದೆ ಸಹಕರಿಸಬೇಕು. ತುರ್ತು ಸೇವೆಗಳಿಗೆ ಸರ್ಕಾರ ವಿನಾಯಿತಿ ಪ್ರಕಟಿಸಿದೆ. ಮಾಧ್ಯಮಗಳ ಮೂಲಕ ಪ್ರಕಟವಾಗುವ ಸರ್ಕಾರದ ಮಾರ್ಗದರ್ಶಿ ಸೂಚನೆ ತಿಳಿದುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.