ಮುಖಂಡ ಎಚ್.ಎಂ.ರವಿಕುಮಾರ್ ಮಾತನಾಡಿ, ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲಾಧಿಕಾರಿ ಕರೀಗೌಡ ಅವರು ರಾಗಿ ಬೆಳೆ ಪರಿಶೀಲನೆಗೆ ಬಂದಾಗ ವಾಜರಹಳ್ಳಿ ಕೆರೆ ಸ್ಥಿತಿ ಬಗ್ಗೆ ಗಮನಕ್ಕೆ ತರಲಾಗಿತ್ತು. ಅಧಿಕಾರಿಗಳಿಗೆ ಕರೆ ಮಾಡಿ ನರೇಗಾದಲ್ಲಿ ಕಾಮಗಾರಿ ಎತ್ತಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲು ಸೂಚನೆ ನೀಡಿದ್ದರು ಎಂದರು.
ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ರಾಧಮ್ಮ ಮುನಿರಾಜು, ಸದಸ್ಯ ಕೆ.ಸಿ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮಹೇಶ್, ಶೈಲ ಜಗದೀಶ್, ಕೊಯಿರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್, ವಿಶ್ವನಾಥಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಮೂರ್ತಿ, ಕಾರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜ್, ಜೆಡಿಎಸ್ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಬೀರಪ್ಪ, ಹಾಪ್ ಕಾಮ್ ನಿರ್ದೇಶಕ ಶ್ರೀನಿವಾಸ್, ಮುಖಂಡರಾದ ಚಿಕ್ಕನಾರಾಯಣಸ್ವಾಮಿ, ರಾಮಾಂಜಿನಪ್ಪ, ಎಂ.ಶ್ರೀನಿವಾಸ್, ಚಂದ್ರೇಗೌಡ ಇದ್ದರು.