ಆರ್ಥಿಕ ಮುಗ್ಗಟ್ಟು ಹಾಗೂ ಲಾಕ್ಡೌನ್ ಸಂಕಷ್ಟಗಳಿಗೆ ಸಿಲುಕಿರುವ ಜನತೆಯ ಮೇಲೆ ಅಪಾರವಾದ ತೆರಿಗೆ ಭಾರ ಹೊರಿಸಿ ಜೀವಂತ ಶವವನ್ನಾಗಿ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್, ದಿನಸಿ, ಸಾರಿಗೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಖಾಸಗಿ ಕಂಪನಿಗಳಿಗೆ ಸುಲಿಗೆ ಮಾಡಲು ಅವಕಾಶ ಮಾಡಿಕೊಟ್ಟ ಪರಿಣಾಮ ಆದಾಯ ಪ್ರಮಾಣ ಕುಸಿಯುತ್ತಿದೆ. ಹೀಗಾದರೆ ಜನಸಾಮಾನ್ಯರು ಜೀವನ ನಡೆಸುವುದಾದರು ಹೇಗೆ, ಒಗ್ಗಟ್ಟಿನಿಂದ ಹೋರಾಡಿ ನಮ್ಮ ಬದುಕನ್ನು ಉತ್ತಮ ಪಡಿಸುವ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಗಳ ಮೇಲೆ ಒತ್ತಡ ಹೇರಬೇಕಾಗಿದೆ ಎಂದರು.