ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲಾಗುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತಿಳಿಸಿದರು.
ಶೋಭಾಕರಂದ್ಲಾಜೆ ಸೇರಿದಂತೆ ಬೇರೆ ಯಾವುದೇ ಸಂಸದರಿಗೆ ಟಿಕೆಟ್ ಕೊಡುವುದು ಬೇಡ ಎಂದು ವರಿಷ್ಠರಿಗೆ ತಿಳಿಸಿರುವುದಾಗಿ ಯಡಿಯೂರಪ್ಪ ಹೇಳಿದರು.
ಸಂಸದ ಶ್ರೀರಾಮುಲು, ನನ್ನನ್ನು ಬಿಟ್ಟು ಬೇರೆ ಯಾವುದೇ ಸಂಸದರಿಗೆ ವಿಧಾನಸಭಾ ಚುನಾವಣೆ ಟಿಕೆಟ್ ನೀಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿಯ ನಿಲುವನ್ನು ಖಂ ಡಿಸಿದ ಟಿಕೆಟ್ ಆಕಾಂಕ್ಷಿ ಎನ್.ಆರ್ ರಮೇಶ್ ಅವರು ಟಿಕೆಟ್ ₹2 ಕೋಟಿಗೆ ಮಾರಾಟವಾಗಿದೆ ಎಂದು ಆರೋಪಿಸಿದ್ದಾರೆ.