ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕಾಲೇಜಿಗೆ ಹೋದ ವಿದ್ಯಾರ್ಥಿ ನಾಪತ್ತೆ

Published 8 ಆಗಸ್ಟ್ 2023, 14:19 IST
Last Updated 8 ಆಗಸ್ಟ್ 2023, 14:19 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಕೆ.ಸಾಗರ್ ಜು.31ರಂದು ಕಾಲೇಜಿಗೆ ಹೋಗುವುದಾಗಿ ಹೋದವನು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಟ್ಟಣದ 19ನೇ ವಾರ್ಡ್‌ನ ರಹಮತ್ ನಗರದಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ವಿದ್ಯಾರ್ಥಿ ಜು.31ರಂದು ಬೆಳಿಗ್ಗೆ ಸ್ನೇಹಿತನೊಂದಿಗೆ ಕಾಲೇಜಿಗೆ ಎಂದು ಹೋದವನು ವಾಪಸ್‌ ಮನೆಗೆ ಬಂದಿಲ್ಲ. ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರ ಬಳಿ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ವಿದ್ಯಾರ್ಥಿ ತಂದೆ ಕೃಷ್ಣಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ‌

ಸುಳಿವು ಪತ್ತೆಯಾದರೆ ವಿಜಯಪುರ ಪೊಲೀಸ್ ಠಾಣೆ  08027668444,  9845685678 ಸಂಪರ್ಕಿಸಲು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT