<p><strong>ದೇವನಹಳ್ಳಿ: </strong>ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡದವರಿಗೆ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಆಸಕ್ತ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಕಚೇರಿಗಳಲ್ಲಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜು.31ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸಬೇಕು.</p>.<p>ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಕರ್ನಾಟಕದವರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು. ಫಲಾನುಭವಿಗಳ ವಾರ್ಷಿಕ ಆದಾಯ ₹ 1.50 ಲಕ್ಷದೊಳಗೆ ಇರತಕ್ಕದ್ದು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು.</p>.<p>ಅರ್ಜಿದಾರರಾಗಲಿ, ಕುಟುಂಬದ ಸದಸ್ಯರಾಗಲಿ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಬಿಪಿಎಲ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು. ಸದರಿ ಘಟಕದ ವೆಚ್ಚ ₹ 5.50 ಲಕ್ಷ ಆಗಿದ್ದು, ಇಲಾಖೆ ವತಿಯಿಂದ ಶೇ 75ರಷ್ಟು ಅಂದರೆ ₹ 4,12,500 ಸಹಾಯಧನ ನೀಡಲಾಗುವುದು. ಶೇ 25ರಷ್ಟು ಅಂದರೆ ₹ 1,37,500 ಫಲಾನುಭವಿ ಭರಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಯಿಂದ ಅನುಮತಿ ಪತ್ರ ಸಲ್ಲಿಸಬೇಕು.</p>.<p>ಹೆಚ್ಚಿನ ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ದೂರವಾಣಿ ಸಂಖ್ಯೆ 080-29787448, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ– ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ–ದೂರವಾಣಿ ಸಂಖ್ಯೆ 080-27623681, ಹೊಸಕೋಟೆ-ದೂರವಾಣಿ ಸಂಖ್ಯೆ 080-27931528, ನೆಲಮಂಗಲ-ದೂರವಾಣಿ ಸಂಖ್ಯೆ 080-27723172 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡದವರಿಗೆ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಆಸಕ್ತ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಕಚೇರಿಗಳಲ್ಲಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜು.31ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸಬೇಕು.</p>.<p>ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಕರ್ನಾಟಕದವರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು. ಫಲಾನುಭವಿಗಳ ವಾರ್ಷಿಕ ಆದಾಯ ₹ 1.50 ಲಕ್ಷದೊಳಗೆ ಇರತಕ್ಕದ್ದು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು.</p>.<p>ಅರ್ಜಿದಾರರಾಗಲಿ, ಕುಟುಂಬದ ಸದಸ್ಯರಾಗಲಿ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಬಿಪಿಎಲ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು. ಸದರಿ ಘಟಕದ ವೆಚ್ಚ ₹ 5.50 ಲಕ್ಷ ಆಗಿದ್ದು, ಇಲಾಖೆ ವತಿಯಿಂದ ಶೇ 75ರಷ್ಟು ಅಂದರೆ ₹ 4,12,500 ಸಹಾಯಧನ ನೀಡಲಾಗುವುದು. ಶೇ 25ರಷ್ಟು ಅಂದರೆ ₹ 1,37,500 ಫಲಾನುಭವಿ ಭರಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಯಿಂದ ಅನುಮತಿ ಪತ್ರ ಸಲ್ಲಿಸಬೇಕು.</p>.<p>ಹೆಚ್ಚಿನ ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ದೂರವಾಣಿ ಸಂಖ್ಯೆ 080-29787448, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ– ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ–ದೂರವಾಣಿ ಸಂಖ್ಯೆ 080-27623681, ಹೊಸಕೋಟೆ-ದೂರವಾಣಿ ಸಂಖ್ಯೆ 080-27931528, ನೆಲಮಂಗಲ-ದೂರವಾಣಿ ಸಂಖ್ಯೆ 080-27723172 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>