<p><strong>ವಿಜಯಪುರ: ‘</strong>ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶ್ರದ್ಧೆ ಹಾಗೂ ತಪಸ್ಸು ಮಾಡಿ ಓದಿದರೆ ಸಾಧನೆ ಮಾಡುವುದು ಕಷ್ಟವಲ್ಲ. ಇಚ್ಛಾಶಕ್ತಿಯಿಂದ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪಾಠಶಾಲೆಯ ಮುಖ್ಯಶಿಕ್ಷಕ ಮನೋಹರ್ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪಾಠಶಾಲೆಯಲ್ಲಿ ಸೋಮವಾರ ಅಗಸ್ತ್ಯ ಫೌಂಡೇಷನ್ಯಿಂದ 6ನೇ ತರಗತಿಯ ಮಕ್ಕಳಿಗೆ 200ಕ್ಕೂ ಹೆಚ್ಚು ಪ್ರಯೋಗಾತ್ಮಕ ಉಪಕರಣಗಳ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಂತ್ರಜ್ಞಾನವೆಂಬುದು ಇಂಗ್ಲಿಷ್ ಮೂಲದ್ದು. ಹೀಗಾಗಿ, ಕನ್ನಡದವರಿಗೆ ಇದು ಕಬ್ಬಿಣದ ಕಡಲೆ ಎಂಬ ಮಾತು ಸಾಮಾನ್ಯವಾಗಿ ಕೇಳಿಬರುತ್ತಿದೆ. ಆದರೆ, ಕನ್ನಡದಲ್ಲೂ ಇದನ್ನು ಸುಲಭವಾಗಿ ಕಲಿಯುವುದಕ್ಕೆ ನೆರವಾಗಲು ಅಂತರ್ಜಾಲ ನೆರವಾಗಿದೆ ಎಂದು ಹೇಳಿದರು.</p>.<p>ಬದಲಾಗುತ್ತಿರುವ ಕಾಲಮಾನದಲ್ಲಿ ವಿಜ್ಞಾನ ಅತಿವೇಗವಾಗಿ ಬೆಳೆಯುತ್ತಿದೆ. ಮನುಷ್ಯನ ಪ್ರತಿಯೊಂದು ಬೆಳವಣಿಗೆಗೂ ವಿಜ್ಞಾನ ಸಹಾಯಕವಾಗಿದೆ. ವಿಜ್ಞಾನವಿಲ್ಲದೆ ಯಾರಿಗೂ ಭವಿಷ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದರು.</p>.<p>ಅಗಸ್ತ್ಯ ಫೌಂಡೇಷನ್ನ ತಾಲ್ಲೂಕು ಸಂಯೋಜಕ ಸತೀಶ್ ನಾಯಕ್ ಮಾತನಾಡಿ, ಮಕ್ಕಳು ಶಿಕ್ಷಕರ ಮಾರ್ಗದರ್ಶನದೊಂದಿಗೆ ಸಂಸ್ಥೆಯಿಂದ ನೀಡಿರುವ ಈ ಉಪಕರಣಗಳ ಕಿಟ್ ಬಳಸಿಕೊಂಡು ತಮ್ಮ ಬುದ್ಧಿಮತ್ತೆಯನ್ನು ಒರೆಗೆ ಹಚ್ಚುವಂತಹ ಕೆಲಸವಾಗಬೇಕು ಎಂದು ತಿಳಿಸಿದರು.</p>.<p>ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಯಾಗಬೇಕಾದರೆ ಚಿಕ್ಕವಯಸ್ಸಿನಿಂದಲೇ ಪ್ರತಿಯೊಂದನ್ನು ಪರಿಶೀಲಿಸುವ ಹಾಗೂ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಅಗಸ್ತ್ಯ ಫೌಂಡೇಶನ್ನಿಂದ 79 ಮಕ್ಕಳಿಗೆ ಕಿಟ್ ವಿತರಿಸಲಾಯಿತು. ಶಿಕ್ಷಕರಾದ ಸೀಮಾ, ವಿಜಯಕುಮಾರಿ, ಸರಸ್ವತಿ, ಶೋಭಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: ‘</strong>ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶ್ರದ್ಧೆ ಹಾಗೂ ತಪಸ್ಸು ಮಾಡಿ ಓದಿದರೆ ಸಾಧನೆ ಮಾಡುವುದು ಕಷ್ಟವಲ್ಲ. ಇಚ್ಛಾಶಕ್ತಿಯಿಂದ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪಾಠಶಾಲೆಯ ಮುಖ್ಯಶಿಕ್ಷಕ ಮನೋಹರ್ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪಾಠಶಾಲೆಯಲ್ಲಿ ಸೋಮವಾರ ಅಗಸ್ತ್ಯ ಫೌಂಡೇಷನ್ಯಿಂದ 6ನೇ ತರಗತಿಯ ಮಕ್ಕಳಿಗೆ 200ಕ್ಕೂ ಹೆಚ್ಚು ಪ್ರಯೋಗಾತ್ಮಕ ಉಪಕರಣಗಳ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಂತ್ರಜ್ಞಾನವೆಂಬುದು ಇಂಗ್ಲಿಷ್ ಮೂಲದ್ದು. ಹೀಗಾಗಿ, ಕನ್ನಡದವರಿಗೆ ಇದು ಕಬ್ಬಿಣದ ಕಡಲೆ ಎಂಬ ಮಾತು ಸಾಮಾನ್ಯವಾಗಿ ಕೇಳಿಬರುತ್ತಿದೆ. ಆದರೆ, ಕನ್ನಡದಲ್ಲೂ ಇದನ್ನು ಸುಲಭವಾಗಿ ಕಲಿಯುವುದಕ್ಕೆ ನೆರವಾಗಲು ಅಂತರ್ಜಾಲ ನೆರವಾಗಿದೆ ಎಂದು ಹೇಳಿದರು.</p>.<p>ಬದಲಾಗುತ್ತಿರುವ ಕಾಲಮಾನದಲ್ಲಿ ವಿಜ್ಞಾನ ಅತಿವೇಗವಾಗಿ ಬೆಳೆಯುತ್ತಿದೆ. ಮನುಷ್ಯನ ಪ್ರತಿಯೊಂದು ಬೆಳವಣಿಗೆಗೂ ವಿಜ್ಞಾನ ಸಹಾಯಕವಾಗಿದೆ. ವಿಜ್ಞಾನವಿಲ್ಲದೆ ಯಾರಿಗೂ ಭವಿಷ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದರು.</p>.<p>ಅಗಸ್ತ್ಯ ಫೌಂಡೇಷನ್ನ ತಾಲ್ಲೂಕು ಸಂಯೋಜಕ ಸತೀಶ್ ನಾಯಕ್ ಮಾತನಾಡಿ, ಮಕ್ಕಳು ಶಿಕ್ಷಕರ ಮಾರ್ಗದರ್ಶನದೊಂದಿಗೆ ಸಂಸ್ಥೆಯಿಂದ ನೀಡಿರುವ ಈ ಉಪಕರಣಗಳ ಕಿಟ್ ಬಳಸಿಕೊಂಡು ತಮ್ಮ ಬುದ್ಧಿಮತ್ತೆಯನ್ನು ಒರೆಗೆ ಹಚ್ಚುವಂತಹ ಕೆಲಸವಾಗಬೇಕು ಎಂದು ತಿಳಿಸಿದರು.</p>.<p>ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಯಾಗಬೇಕಾದರೆ ಚಿಕ್ಕವಯಸ್ಸಿನಿಂದಲೇ ಪ್ರತಿಯೊಂದನ್ನು ಪರಿಶೀಲಿಸುವ ಹಾಗೂ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಅಗಸ್ತ್ಯ ಫೌಂಡೇಶನ್ನಿಂದ 79 ಮಕ್ಕಳಿಗೆ ಕಿಟ್ ವಿತರಿಸಲಾಯಿತು. ಶಿಕ್ಷಕರಾದ ಸೀಮಾ, ವಿಜಯಕುಮಾರಿ, ಸರಸ್ವತಿ, ಶೋಭಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>