<p><strong>ಸೂಲಿಬೆಲೆ (ಹೊಸಕೋಟೆ):</strong> ‘ಪದವಿ ಪೂರ್ವ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಯ ಹೊಣೆ ನಮಗೆ ಬಿಟ್ಟುಬಿಡಿ. ಆದರೆ ಕಾಲೇಜು ಹಂತದಲ್ಲಿ ವಿದ್ಯೆಯನ್ನು ಸಂಸ್ಕಾರ ನಿಡುವ ರೀತಿಯಲ್ಲಿ ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ’ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು.</p>.<p>ಸೂಲಿಬೆಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಖಜಾಂಚಿ ವಿ.ಪ್ರಸಾದ್ ಮಾತನಾಡಿ, ವಿದ್ಯಾರ್ಥಿ ದಿಸೆಯಲ್ಲಿ ಶಿಸ್ತು, ಸಂಯಮ ಮೈಗೂಡಿಸಿಕೊಳ್ಳಬೇಕು. ಓದಿನ ಕಡೆ ಹೆಚ್ಚು ಅಸಕ್ತಿ ವಹಿಸಬೇಕು. ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡರ ನಂದಿನಿ ಪೇಡಾ, ನಂದಿನಿ ಮಜ್ಜಿಗೆ ಹಾಗೂ ಊಟದ ವ್ಯವಸ್ಥೆ ಕಲ್ಪಿಸಿಕೊಟ್ಟರು.</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಾಷಾ, ಪ್ರಾಂಶುಪಾಲ ಮಂಜುನಾಥ್, ಜನಾರ್ದನರೆಡ್ಡಿ, ನಗರೇನಹಳ್ಳಿ ನಾಗರಾಜಪ್ಪ, ವೆಂಕಟೇಶ್, ಜಿಯಾವುಲ್ಲಾ, ಪ್ರಶಾಂತ್, ಬೆಟ್ಟಹಳ್ಳಿ ಗೋಪಿನಾಥ್, ರಾಜೇಶ್ವರಿ, ಕೆ.ಎಂ.ಚೌಡೇಗೌಡ, ಸುಬ್ರಮಣಿ, ಕುಮಾರ್, ಸರಸ್ವತಿ, ರೇಣುಕಾ, ಶ್ರೀಕೃಪಾ, ಮೃತ್ಯುಂಜಯ, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ (ಹೊಸಕೋಟೆ):</strong> ‘ಪದವಿ ಪೂರ್ವ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಯ ಹೊಣೆ ನಮಗೆ ಬಿಟ್ಟುಬಿಡಿ. ಆದರೆ ಕಾಲೇಜು ಹಂತದಲ್ಲಿ ವಿದ್ಯೆಯನ್ನು ಸಂಸ್ಕಾರ ನಿಡುವ ರೀತಿಯಲ್ಲಿ ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ’ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು.</p>.<p>ಸೂಲಿಬೆಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಖಜಾಂಚಿ ವಿ.ಪ್ರಸಾದ್ ಮಾತನಾಡಿ, ವಿದ್ಯಾರ್ಥಿ ದಿಸೆಯಲ್ಲಿ ಶಿಸ್ತು, ಸಂಯಮ ಮೈಗೂಡಿಸಿಕೊಳ್ಳಬೇಕು. ಓದಿನ ಕಡೆ ಹೆಚ್ಚು ಅಸಕ್ತಿ ವಹಿಸಬೇಕು. ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡರ ನಂದಿನಿ ಪೇಡಾ, ನಂದಿನಿ ಮಜ್ಜಿಗೆ ಹಾಗೂ ಊಟದ ವ್ಯವಸ್ಥೆ ಕಲ್ಪಿಸಿಕೊಟ್ಟರು.</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಾಷಾ, ಪ್ರಾಂಶುಪಾಲ ಮಂಜುನಾಥ್, ಜನಾರ್ದನರೆಡ್ಡಿ, ನಗರೇನಹಳ್ಳಿ ನಾಗರಾಜಪ್ಪ, ವೆಂಕಟೇಶ್, ಜಿಯಾವುಲ್ಲಾ, ಪ್ರಶಾಂತ್, ಬೆಟ್ಟಹಳ್ಳಿ ಗೋಪಿನಾಥ್, ರಾಜೇಶ್ವರಿ, ಕೆ.ಎಂ.ಚೌಡೇಗೌಡ, ಸುಬ್ರಮಣಿ, ಕುಮಾರ್, ಸರಸ್ವತಿ, ರೇಣುಕಾ, ಶ್ರೀಕೃಪಾ, ಮೃತ್ಯುಂಜಯ, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>