<p><strong>ದೇವನಹಳ್ಳಿ:</strong> ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ದೇಶ ಕಂಡ ಅಪರೂಪದ ಸಾಹಿತಿ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತೋತ್ಸವದಲ್ಲಿ ಮಾತನಾಡಿದರು.</p>.<p>ಮಹರ್ಷಿ ವಾಲ್ಮೀಕಿ ಅವರು ತಮ್ಮ ಪವಿತ್ರ ಸಾಹಿತ್ಯದ ಮೂಲಕ ಬೋಧಿಸಿರುವ ಮಾನವೀಯ ಮೌಲ್ಯ ಪ್ರತಿಯೊಬ್ಬರು ಅನುಸರಿಸಬೇಕು. ಅವರ ಆದರ್ಶ ಸಮಾಜದ ಎಲ್ಲ ಹಂತದಲ್ಲಿ ಹರಡುವ ಮೂಲಕ ಮುಂದಿನ ಪೀಳಿಗೆಗೆ ಅವರ ಸಂದೇಶ ತಲುಪಿಸುವ ಕಾರ್ಯ ಮಾಡಬೇಕು ಎಂದರು.</p>.<p>ಜೆಡಿಎಸ್ ಎಸ್ಟಿ ಘಟಕದ ಅಧ್ಯಕ್ಷ ಮಾಳಿಗೇನಹಳ್ಳಿ ವೆಂಕಟೇಶ ಮೂರ್ತಿ, ಆದರ್ಶ ಪುರುಷ ಶ್ರೀರಾಮನ ಕುರಿತು 24,000 ಕಾವ್ಯಗಳನ್ನು ಮಹರ್ಷಿ ವಾಲ್ಮೀಕಿ ರಚಿಸಿದ್ದು ಅಸಾಧಾರಣ ಸಾಧನೆಯಾಗಿದೆ. ರಾಮಾಯಣದ ಸುಂದರಕಾಂಡ ಪಠಣ ಲೋಕ ಕಲ್ಯಾಣಕ್ಕೆ ಸಹಾಯಕ ಎಂದರು.</p>.<p>ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಹಿರಿಯ ಸದಸ್ಯರನ್ನು ಸತ್ಕರಿಸಲಾಯಿತು. ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಮುನೇಗೌಡ, ಪುರಸಭೆ ಉಪಾಧ್ಯಕ್ಷ ಜಿ.ಎ.ರವೀಂದ್ರ, ಮುಖಂಡರಾದ ರಾಮಣ್ಣ, ಬಿದಲೂರು ಮುನಿರಾಜು, ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ದೇಶ ಕಂಡ ಅಪರೂಪದ ಸಾಹಿತಿ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತೋತ್ಸವದಲ್ಲಿ ಮಾತನಾಡಿದರು.</p>.<p>ಮಹರ್ಷಿ ವಾಲ್ಮೀಕಿ ಅವರು ತಮ್ಮ ಪವಿತ್ರ ಸಾಹಿತ್ಯದ ಮೂಲಕ ಬೋಧಿಸಿರುವ ಮಾನವೀಯ ಮೌಲ್ಯ ಪ್ರತಿಯೊಬ್ಬರು ಅನುಸರಿಸಬೇಕು. ಅವರ ಆದರ್ಶ ಸಮಾಜದ ಎಲ್ಲ ಹಂತದಲ್ಲಿ ಹರಡುವ ಮೂಲಕ ಮುಂದಿನ ಪೀಳಿಗೆಗೆ ಅವರ ಸಂದೇಶ ತಲುಪಿಸುವ ಕಾರ್ಯ ಮಾಡಬೇಕು ಎಂದರು.</p>.<p>ಜೆಡಿಎಸ್ ಎಸ್ಟಿ ಘಟಕದ ಅಧ್ಯಕ್ಷ ಮಾಳಿಗೇನಹಳ್ಳಿ ವೆಂಕಟೇಶ ಮೂರ್ತಿ, ಆದರ್ಶ ಪುರುಷ ಶ್ರೀರಾಮನ ಕುರಿತು 24,000 ಕಾವ್ಯಗಳನ್ನು ಮಹರ್ಷಿ ವಾಲ್ಮೀಕಿ ರಚಿಸಿದ್ದು ಅಸಾಧಾರಣ ಸಾಧನೆಯಾಗಿದೆ. ರಾಮಾಯಣದ ಸುಂದರಕಾಂಡ ಪಠಣ ಲೋಕ ಕಲ್ಯಾಣಕ್ಕೆ ಸಹಾಯಕ ಎಂದರು.</p>.<p>ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಹಿರಿಯ ಸದಸ್ಯರನ್ನು ಸತ್ಕರಿಸಲಾಯಿತು. ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಮುನೇಗೌಡ, ಪುರಸಭೆ ಉಪಾಧ್ಯಕ್ಷ ಜಿ.ಎ.ರವೀಂದ್ರ, ಮುಖಂಡರಾದ ರಾಮಣ್ಣ, ಬಿದಲೂರು ಮುನಿರಾಜು, ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>