ಜನಸ್ಪಂದನ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ದೇವನಹಳ್ಳಿ ಕಸಬಾ, ಚನ್ನರಾಯಪಟ್ಟಣ, ವಿಜಯಪುರ, ಕುಂದಾಣ, ತೂಬುಗೆರೆ ಹೋಬಳಿ ವ್ಯಾಪ್ತಿಯಲ್ಲಿನ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಉತ್ತಮ ಅವಕಾಶ ಇದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಪರಿಹಾರ ಕಂಡುಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ. ತಾವು ಬನ್ನಿ ಇತರರನ್ನು ಕರೆದುಕೊಂಡು ಬರಬೇಕು. ಇದೊಂದು ಪಕ್ಷಾತೀತವಾದ ಕಾರ್ಯಕ್ರಮವಾಗಲಿದೆ ಎಂದರು.