<p><strong>ಹೊಸಕೋಟೆ:</strong> ನಗರದ ಸರ್ವತೋಮುಖ ಅಭಿವೃದ್ಧಿಯಾಗಲು ಎಂ.ಟಿ.ಬಿ. ನಾಗರಾಜ್ ನೇತೃತ್ವದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಗರಸಭೆಯ ಚುಕ್ಕಾಣಿ ಹಿಡಿಯಬೇಕು ಎಂದು ನಗರ ಬಿಜೆಪಿ ಅಧ್ಯಕ್ಷ ಸಿ. ಜಯರಾಜ್ ಹೇಳಿದ್ದಾರೆ.</p>.<p>ಅವರು ನಗರದ ಎಂಟಿಬಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾಗರಾಜ್ ಕಳೆದ ಎರಡು ಬಾರಿ ಶಾಸಕರಾಗಿದ್ದಾಗ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಅದು ಮುಂದುವರೆಯಬೇಕಾದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕು ಎಂದರು.</p>.<p>ತಾಲ್ಲೂಕಿನ ಶಾಸಕರು ಯಾರು ಅನ್ನುವುದಕ್ಕಿಂತ ತಾಲ್ಲೂಕನ್ನು ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರದಿಂದ ಹಣ ಬಿಡುಗಡೆಗಳಿಸುವ ವ್ಯಕ್ತಿ ಯಾರು ಎಂಬುದು ಮುಖ್ಯ. ಆ ಶಕ್ತಿ ಇರುವುದು ನಾಗರಾಜ್ ಅವರಿಗೆ ಎಂದರು.</p>.<p>‘ನಗರದಲ್ಲಿ ನೀರಿನ ಸಮಸ್ಯೆ ಕಗ್ಗಂಟಾಗಿತ್ತು. ಸ್ವಂತ ಖರ್ಚಿನಲ್ಲಿ ನೂರಾರು ಬೋರ್ವೆಲ್ಗಳನ್ನು ಕೊರೆಸಿ ನಗರದ ಎಲ್ಲ ಕಡೆಗಳಿಗೆ ನಾಲ್ಕು ದಿನಕ್ಕೊಮ್ಮೆ ನೀರು ಬರುವಂತೆ ಮಾಡಿದ್ದಾರೆ. ಬೋರ್ವೆಲ್ಗಳ ನಿರ್ವಹಣೆಯನ್ನು ಪ್ರತಿ ವರ್ಷ ₹50 ರಿಂದ 60 ಲಕ್ಷವನ್ನು ಸ್ವಂತ ಖರ್ಚಿನಲ್ಲಿ ಮಾಡಿಸುತ್ತಿದ್ದರು’ ಎಂದು ವಿವರಿಸಿದರು.</p>.<p>ನಗರದ ಪುರಾತನ ದೇವಾಲಯಗಳನ್ನು ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಿದ್ದಾರೆ ಎಂದರು.</p>.<p>ತಾಲ್ಲೂಕಿನ ಕೆರೆಗಳನ್ನು ತುಂಬುವ ಉದ್ದೇಶದಿಂದ ಕೆ.ಸಿ. ವ್ಯಾಲಿ ನೀರನ್ನು ತಾಲ್ಲೂಕಿಗೆ ತರಲಾಗಿದೆ. ಈಗಾಗಲೇ ತಾವರೆಕೆರೆ ಕೆರೆ ತುಂಬಿದೆ. ಉಳಿದ ಕೆರೆಗಳು ಹಂತಹಂತವಾಗಿ ತುಂಬಿ ಅಂತರ್ಜಲದ ಮಟ್ಟವೂ ಹೆಚ್ಚಾಗುತ್ತದೆ ಎಂದರು.</p>.<p>ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಖಂಡಿತವಾಗಿಯೂ ನಾಗರಾಜ್ ಗೆದ್ದು ಸಚಿವರಾಗುತ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಸಾವಿರಾರು ಕೋಟಿ ಅನುದಾನವನ್ನು ತಂದು ತಾಲ್ಲೂಕನ್ನು ಮುನ್ನಡೆಸುತ್ತಾರೆ. ಅದಕ್ಕಾಗಿ ತಾಲ್ಲೂಕಿನ ಮತದಾರರು ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಶಶಿಧರ್, ಚೌಡಪ್ಪ ಹಾಗೂ ಶೌರತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ನಗರದ ಸರ್ವತೋಮುಖ ಅಭಿವೃದ್ಧಿಯಾಗಲು ಎಂ.ಟಿ.ಬಿ. ನಾಗರಾಜ್ ನೇತೃತ್ವದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಗರಸಭೆಯ ಚುಕ್ಕಾಣಿ ಹಿಡಿಯಬೇಕು ಎಂದು ನಗರ ಬಿಜೆಪಿ ಅಧ್ಯಕ್ಷ ಸಿ. ಜಯರಾಜ್ ಹೇಳಿದ್ದಾರೆ.</p>.<p>ಅವರು ನಗರದ ಎಂಟಿಬಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾಗರಾಜ್ ಕಳೆದ ಎರಡು ಬಾರಿ ಶಾಸಕರಾಗಿದ್ದಾಗ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಅದು ಮುಂದುವರೆಯಬೇಕಾದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕು ಎಂದರು.</p>.<p>ತಾಲ್ಲೂಕಿನ ಶಾಸಕರು ಯಾರು ಅನ್ನುವುದಕ್ಕಿಂತ ತಾಲ್ಲೂಕನ್ನು ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರದಿಂದ ಹಣ ಬಿಡುಗಡೆಗಳಿಸುವ ವ್ಯಕ್ತಿ ಯಾರು ಎಂಬುದು ಮುಖ್ಯ. ಆ ಶಕ್ತಿ ಇರುವುದು ನಾಗರಾಜ್ ಅವರಿಗೆ ಎಂದರು.</p>.<p>‘ನಗರದಲ್ಲಿ ನೀರಿನ ಸಮಸ್ಯೆ ಕಗ್ಗಂಟಾಗಿತ್ತು. ಸ್ವಂತ ಖರ್ಚಿನಲ್ಲಿ ನೂರಾರು ಬೋರ್ವೆಲ್ಗಳನ್ನು ಕೊರೆಸಿ ನಗರದ ಎಲ್ಲ ಕಡೆಗಳಿಗೆ ನಾಲ್ಕು ದಿನಕ್ಕೊಮ್ಮೆ ನೀರು ಬರುವಂತೆ ಮಾಡಿದ್ದಾರೆ. ಬೋರ್ವೆಲ್ಗಳ ನಿರ್ವಹಣೆಯನ್ನು ಪ್ರತಿ ವರ್ಷ ₹50 ರಿಂದ 60 ಲಕ್ಷವನ್ನು ಸ್ವಂತ ಖರ್ಚಿನಲ್ಲಿ ಮಾಡಿಸುತ್ತಿದ್ದರು’ ಎಂದು ವಿವರಿಸಿದರು.</p>.<p>ನಗರದ ಪುರಾತನ ದೇವಾಲಯಗಳನ್ನು ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಿದ್ದಾರೆ ಎಂದರು.</p>.<p>ತಾಲ್ಲೂಕಿನ ಕೆರೆಗಳನ್ನು ತುಂಬುವ ಉದ್ದೇಶದಿಂದ ಕೆ.ಸಿ. ವ್ಯಾಲಿ ನೀರನ್ನು ತಾಲ್ಲೂಕಿಗೆ ತರಲಾಗಿದೆ. ಈಗಾಗಲೇ ತಾವರೆಕೆರೆ ಕೆರೆ ತುಂಬಿದೆ. ಉಳಿದ ಕೆರೆಗಳು ಹಂತಹಂತವಾಗಿ ತುಂಬಿ ಅಂತರ್ಜಲದ ಮಟ್ಟವೂ ಹೆಚ್ಚಾಗುತ್ತದೆ ಎಂದರು.</p>.<p>ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಖಂಡಿತವಾಗಿಯೂ ನಾಗರಾಜ್ ಗೆದ್ದು ಸಚಿವರಾಗುತ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಸಾವಿರಾರು ಕೋಟಿ ಅನುದಾನವನ್ನು ತಂದು ತಾಲ್ಲೂಕನ್ನು ಮುನ್ನಡೆಸುತ್ತಾರೆ. ಅದಕ್ಕಾಗಿ ತಾಲ್ಲೂಕಿನ ಮತದಾರರು ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಶಶಿಧರ್, ಚೌಡಪ್ಪ ಹಾಗೂ ಶೌರತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>