ರಾಜ್ಯ ರೈತ ಸಂಘದ ಮುಖಂಡ ಎನ್.ಆರ್.ಪ್ರಸನ್ನ ಮಾತನಾಡಿ, ‘ರೈತ ಸಂಘ ನಡೆಸಿರುವ ಹಲವು ಹೋರಾಟಗಳ ಫಲವಾಗಿ, ಇಂದು ಸರ್ಕಾರಗಳು ತಮ್ಮ ನೀತಿಗಳಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿಕೊಂಡಿವೆ. ಆದರೆ ಜಾಗತೀಕರಣದ ನಂತರ ಜಾರಿಯಾಗುತ್ತಿರುವ ಬಹುತೇಕ ಕಾನೂನು, ನೀತಿಗಳು ರೈತರ ವಿರುದ್ಧವಾಗಿಯೇ ಇವೆ. ಬೆಂಬಲ ಬೆಲೆ ಘೋಷಣೆ ಬರೀ ರೈತರನ್ನು ಮೆಚ್ಚಿಸುವ ಸಾಧನವೇ ಹೊರತು, ಬೆಂಬಲ ಬೆಲೆ ಯೋಜನೆಯಲ್ಲಿ ಸೂಕ್ತ ಸಮಯಕ್ಕೆ ಆಹಾರ ಧಾನ್ಯಗಳ ಖರೀದಿ ನಡೆದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.