ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಹಂಸಲೇಖ ಅವರು ಸಮಾಜದ ಸ್ಥಿತಿಯನ್ನು ತಿಳಿಸಿದ್ದಾರೆ. ಪೇಜಾವರ ಸ್ವಾಮೀಜಿ ದಲಿತರ ಕಾಲೊನಿಗಳಿಗೆ ಭೇಟಿ ನೀಡಿದ ಮಾತ್ರಕ್ಕೆ ಜಾತಿ ವ್ಯವಸ್ಥೆ ತೊಲಗಿ ಹೋಗುವುದಿಲ್ಲ. ಅಸ್ಪೃಶ್ಯತೆ ನಿಲ್ಲುವುದಿಲ್ಲ. ಅವರು ಹೇಳಿದ ಕೆಲವು ಮಾತುಗಳಿಂದ ಮೇಲ್ವರ್ಗದ ಜನರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದರು.