ಜಾತ್ಯತೀತ ರಾಷ್ಟ್ರದಲ್ಲಿ ಇಂತಹ ಘಟನೆಗಳು ಅಪಾಯಕಾರಿಯಾಗಿವೆ. ಈ ಬರ್ಬರ ಹತ್ಯೆಯ ನಂತರ ಉತ್ತರ ಪ್ರದೇಶದಲ್ಲಿ ಇಂತಹದ್ದೆ ಮತ್ತೊಂದು ಪ್ರಕರಣ ನಡೆದಿರುವುದು ಮತ್ತೆ ಸಮಾಜ ಬೆಚ್ಚಿ ಬೀಳುವಂತಿದೆ. ಹೆಣ್ಣು ಮಕ್ಕಳಿಗೆ, ಯುವತಿಯರಿಗೆ ಮತ್ತು ಮಹಿಳೆಯರಿಗೆ ಸ್ವಾತಂತ್ರ್ಯ ಬಂದು ಏಳು ದಶಕಗಳು ಉರುಳಿದರೂ ಸುರಕ್ಷತೆ ಇಲ್ಲವೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುವಂತಿದೆ ಎಂದು ತಿಳಿಸಿದರು.