ದೊಡ್ಡಬಳ್ಳಾಪುರ: ಸರ್ಕಾರ ಗ್ರಾಮಸ್ಥರಿಗೆ ನೀಡಿದ್ದ ಎಲ್ಲಾ ಭರವಸೆ ಮರೆತು ಕಣ್ಣು, ಕಿವಿ ಇಲ್ಲದಂತೆ ನಡೆದುಕೊಂಡಿರುವ ಪರಿಣಾಮವೇ ಗ್ರಾಮಸ್ಥರು ರಸ್ತೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. ಹೀಗಾಗಿ ಬಿಬಿಎಂಪಿ ಕಸ ಇಲ್ಲಿಗೆ ಬರುವುದನ್ನು ನಿಲ್ಲಿಸುವಂತೆ ರೈತರು ನಡೆಸುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದೆ. ಈ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಲಾಗಿದೆ ಎಂದು ಪಟ್ಟನಾಯಕನಹಳ್ಳಿ ಮಠದ ಪೀಠಾಧಿಪತಿ ನಂಜಾವಧೂತ ಸ್ವಾಮೀಜಿ ಹೇಳಿದರು.