‘ಲಾಕ್ಡೌನ್ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹೆಕ್ಟೇರ್ಗೆ ₹ 25 ಸಾವಿರ ನಷ್ಟ ಪರಿಹಾರ ನೀಡುವ ಕುರಿತು ಘೋಷಣೆ ಮಾಡಿತ್ತು. ಆದರೆ ಹಲವಾರು ತಾಂತ್ರಿಕ ಕಾರಣಗಳಿಂದಾಗಿ ಇಲ್ಲಿಯವರೆಗೆ ತಾಲ್ಲೂಕಿನ 750 ಹೂವು ಬೆಳೆಗಾರರಿಗೆ ₹21 ಲಕ್ಷ ಮಾತ್ರ ಪರಿಹಾರ ಬಂದಿದೆ. ಇದೇ ರೀತಿ ನೇಕಾರ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರ ಪಟ್ಟಿಗೆ ಸೇರ್ಪಡೆ ಮಾಡಬೇಕು’ ಎನ್ನುವ ಕುರಿತಂತೆ ಮನವಿ ಮಾಡಿದ್ದಾರೆ.