<p>ದೇವನಹಳ್ಳಿ: ತಾಲ್ಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್ ಕೇರ್ ಸೆಂಟರ್ಗೆ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಭೇಟಿ ನೀಡಿ ಅಡುಗೆ ಕೊಠಡಿ ಮತ್ತು ಸೋಂಕಿತರಿಗೆ ನೀಡುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ಸೋಂಕಿತರಿಗೆ ಚಿಕಿತ್ಸೆ ಮತ್ತು ಸೇವೆಯಲ್ಲಿ ಈ ಸೆಂಟರ್ ಜಿಲ್ಲೆಯಲ್ಲಿಯೇ ಮೊದಲ ಸ್ಥಾನದಲ್ಲಿದೆ. ಪಾಸಿಟಿವ್ ಬಂದಂತಹ ರೋಗಿಗಳಿಗೆ 11-14 ದಿನಗಳವರೆಗೆ ಇಲ್ಲಿಯೇ ಇರಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು<br />ಹೇಳಿದರು.</p>.<p>ಒಂದು ವೇಳೆ ಉಸಿರಾಟದ ತೊಂದರೆ ಇದ್ದಲ್ಲಿ ಇಲ್ಲಿಯೇ ಆಮ್ಲಜನಕ ಸಾಂದ್ರಕ ಬಳಸಿಕೊಳ್ಳಲಾಗುವುದು. ಇಲ್ಲಿಯ ತನಕ ಯಾವುದೇ ಸಾವು, ನೋವು ಸಂಭವಿಸಿಲ್ಲ. ಬೆಡ್ಗಳಿಗೂ ಕೊರತೆ ಇಲ್ಲ. ಜಿಲ್ಲಾಧಿಕಾರಿ ಮತ್ತು ಸಚಿವರ ನಿರ್ದೇಶನದ ಪ್ರಕಾರ ಯಾವುದೇ ಆರೋಗ್ಯ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು<br />ತಿಳಿಸಿದರು.</p>.<p>ಮೂರನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ವಿಜಯಪುರದಲ್ಲಿ ಮಕ್ಕಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭವಾಗಿದೆ. ಎಲ್ಲಾ ರೀತಿಯಲ್ಲಿ ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿವೆ ಎಂದರು.</p>.<p>ಕೋವಿಡ್ ಕೇರ್ ಸೆಂಟರ್ ಪ್ರಾರಂಭವಾದಾಗಿನಿಂದಲೂ ಸೂಕ್ತ ರೀತಿಯಲ್ಲಿ ಸೋಂಕಿತರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಾಡದಂತೆ ಎಚ್ಚರವಹಿಸಲಾಗುತ್ತಿದೆ. ದಿನನಿತ್ಯ ಬಿಸಿಯೂಟ, ತರಕಾರಿ ಪಲ್ಯ, ಮೊಟ್ಟೆ ಸೇರಿದಂತೆ ಪೌಷ್ಟಿಕಾಂಶವುಳ್ಳ ಆಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>‘ಆಹಾರದಲ್ಲಿ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಇಲ್ಲಿ ಮೊದಲ ಬಾರಿಗೆ 150 ಸೋಂಕಿತರು ಇದ್ದರು. ಪ್ರಸ್ತುತ 7 ಸೋಂಕಿತರು ಮಾತ್ರ ಇದ್ದಾರೆ ಎಂದು ಹೇಳಿದರು.</p>.<p>ಕುಂದಾಣ ಗ್ರಾ.ಪಂ. ಸದಸ್ಯ ಕೆ.ವಿ. ಸ್ವಾಮಿ, ಉಪ ತಹಶೀಲ್ದಾರ್ ಚೈತ್ರಾ, ಹೆಗ್ಗನಹಳ್ಳಿ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯದ ಡಾ.ವಿಜಯಲಕ್ಷ್ಮಿ, ಆರ್ಐ ಚಿದಾನಂದ್, ನಾಡ ಕಚೇರಿ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ತಾಲ್ಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್ ಕೇರ್ ಸೆಂಟರ್ಗೆ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಭೇಟಿ ನೀಡಿ ಅಡುಗೆ ಕೊಠಡಿ ಮತ್ತು ಸೋಂಕಿತರಿಗೆ ನೀಡುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ಸೋಂಕಿತರಿಗೆ ಚಿಕಿತ್ಸೆ ಮತ್ತು ಸೇವೆಯಲ್ಲಿ ಈ ಸೆಂಟರ್ ಜಿಲ್ಲೆಯಲ್ಲಿಯೇ ಮೊದಲ ಸ್ಥಾನದಲ್ಲಿದೆ. ಪಾಸಿಟಿವ್ ಬಂದಂತಹ ರೋಗಿಗಳಿಗೆ 11-14 ದಿನಗಳವರೆಗೆ ಇಲ್ಲಿಯೇ ಇರಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು<br />ಹೇಳಿದರು.</p>.<p>ಒಂದು ವೇಳೆ ಉಸಿರಾಟದ ತೊಂದರೆ ಇದ್ದಲ್ಲಿ ಇಲ್ಲಿಯೇ ಆಮ್ಲಜನಕ ಸಾಂದ್ರಕ ಬಳಸಿಕೊಳ್ಳಲಾಗುವುದು. ಇಲ್ಲಿಯ ತನಕ ಯಾವುದೇ ಸಾವು, ನೋವು ಸಂಭವಿಸಿಲ್ಲ. ಬೆಡ್ಗಳಿಗೂ ಕೊರತೆ ಇಲ್ಲ. ಜಿಲ್ಲಾಧಿಕಾರಿ ಮತ್ತು ಸಚಿವರ ನಿರ್ದೇಶನದ ಪ್ರಕಾರ ಯಾವುದೇ ಆರೋಗ್ಯ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು<br />ತಿಳಿಸಿದರು.</p>.<p>ಮೂರನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ವಿಜಯಪುರದಲ್ಲಿ ಮಕ್ಕಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭವಾಗಿದೆ. ಎಲ್ಲಾ ರೀತಿಯಲ್ಲಿ ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿವೆ ಎಂದರು.</p>.<p>ಕೋವಿಡ್ ಕೇರ್ ಸೆಂಟರ್ ಪ್ರಾರಂಭವಾದಾಗಿನಿಂದಲೂ ಸೂಕ್ತ ರೀತಿಯಲ್ಲಿ ಸೋಂಕಿತರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಾಡದಂತೆ ಎಚ್ಚರವಹಿಸಲಾಗುತ್ತಿದೆ. ದಿನನಿತ್ಯ ಬಿಸಿಯೂಟ, ತರಕಾರಿ ಪಲ್ಯ, ಮೊಟ್ಟೆ ಸೇರಿದಂತೆ ಪೌಷ್ಟಿಕಾಂಶವುಳ್ಳ ಆಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>‘ಆಹಾರದಲ್ಲಿ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಇಲ್ಲಿ ಮೊದಲ ಬಾರಿಗೆ 150 ಸೋಂಕಿತರು ಇದ್ದರು. ಪ್ರಸ್ತುತ 7 ಸೋಂಕಿತರು ಮಾತ್ರ ಇದ್ದಾರೆ ಎಂದು ಹೇಳಿದರು.</p>.<p>ಕುಂದಾಣ ಗ್ರಾ.ಪಂ. ಸದಸ್ಯ ಕೆ.ವಿ. ಸ್ವಾಮಿ, ಉಪ ತಹಶೀಲ್ದಾರ್ ಚೈತ್ರಾ, ಹೆಗ್ಗನಹಳ್ಳಿ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯದ ಡಾ.ವಿಜಯಲಕ್ಷ್ಮಿ, ಆರ್ಐ ಚಿದಾನಂದ್, ನಾಡ ಕಚೇರಿ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>