<p><strong>ವಿಜಯಪುರ: </strong>ಬಮೂಲ್ನಿಂದ ರೈತರಿಗಾಗಿ ಇರುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಬಮೂಲ್ ನಿರ್ದೇಶಕ ಮಂಜುನಾಥ್ ಹೇಳಿದರು.</p>.<p>ಚನ್ನರಾಯಪಟ್ಟಣ ಸೋಮತ್ತನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ನೀಡಿದ್ದ ಅವರು, ಡೇರಿಗೆ ವರ್ಷದ ಕ್ಯಾಲೆಂಡರ್ ಹಾಗೂ ಬಮೂಲ್ ಕಾರ್ಯಕ್ರಮಗಳುಳ್ಳ ಮಾಹಿತಿ ಪುಸ್ತಕ ವಿತರಿಸಿ ಮಾತನಾಡಿದರು.</p>.<p>ಬಮೂಲ್ನಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರ, ಮೇವು ಕತ್ತರಿಸುವ ಒಂದು ಯಂತ್ರಕ್ಕೆ ₹11,700, ಅಜೋಲಾ 2 ಬ್ಯಾಗ್ಗೆ ಒಂದು ಸಾವಿರ ರೂಪಾಯಿ, ರಾಸುಗಳಿಗೆ ಮ್ಯಾಟ್ ಒಂದನ್ನು ₹2,275ಕ್ಕೆ ನೀಡಲಾಗುತ್ತಿದೆ. ಈ ಸೌಲಭ್ಯಗಳನ್ನು ಪಡೆಯಲು ಚನ್ನರಾಯಪಟ್ಟಣ ಹೋಬಳಿ ನಲ್ಲೂರು, ಗಂಗವಾರ ಚೌಡಪ್ಪನಹಳ್ಳಿ, ಬೂದಿಗೆರೆ ಗ್ರಾಮ ಪಂಚಾಯಿತಿಗಳಿಗೆ ಸೇರುವ ಹಾಲು ಉತ್ಪಾದಕರ ಸಹಕಾರ ಸಂಘದವರು ಬೆಂಗಳೂರು ಪೂರ್ವ ತಾಲ್ಲೂಕಿನ ಬಮೂಲ್ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳನ್ನು ಒದಗಿಸಿ ಪಡೆಯಬಹುದಾಗಿದೆ ಎಂದರು.</p>.<p>ರೈತರ ಅಭಿವೃದ್ಧಿಗೆ ಪೂರಕವಾದ ಸಾಕಷ್ಟು ಸೌಲಭ್ಯಗಳನ್ನು ಸಹಕಾರಿ ಸಂಘಗಳ ಮುಖಾಂತರ ಪಡೆದುಕೊಳ್ಳಬಹುದು. ಈ ಬಗ್ಗೆ ಎಲ್ಲ ಹಾಲು ಉತ್ಪಾದಕರಿಗೆ ಮಾಹಿತಿ ಒದಗಿಸಬೇಕು ಎಂದರು. ಸೋಮತ್ತನಹಳ್ಳಿ ಡೇರಿ ಮುಖಂಡ ಗಂಗಾಧರ್, ಒಕ್ಕೂಟದ ಉಪವ್ಯವಸ್ಥಾಪಕ ಡಾ.ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಬಮೂಲ್ನಿಂದ ರೈತರಿಗಾಗಿ ಇರುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಬಮೂಲ್ ನಿರ್ದೇಶಕ ಮಂಜುನಾಥ್ ಹೇಳಿದರು.</p>.<p>ಚನ್ನರಾಯಪಟ್ಟಣ ಸೋಮತ್ತನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ನೀಡಿದ್ದ ಅವರು, ಡೇರಿಗೆ ವರ್ಷದ ಕ್ಯಾಲೆಂಡರ್ ಹಾಗೂ ಬಮೂಲ್ ಕಾರ್ಯಕ್ರಮಗಳುಳ್ಳ ಮಾಹಿತಿ ಪುಸ್ತಕ ವಿತರಿಸಿ ಮಾತನಾಡಿದರು.</p>.<p>ಬಮೂಲ್ನಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರ, ಮೇವು ಕತ್ತರಿಸುವ ಒಂದು ಯಂತ್ರಕ್ಕೆ ₹11,700, ಅಜೋಲಾ 2 ಬ್ಯಾಗ್ಗೆ ಒಂದು ಸಾವಿರ ರೂಪಾಯಿ, ರಾಸುಗಳಿಗೆ ಮ್ಯಾಟ್ ಒಂದನ್ನು ₹2,275ಕ್ಕೆ ನೀಡಲಾಗುತ್ತಿದೆ. ಈ ಸೌಲಭ್ಯಗಳನ್ನು ಪಡೆಯಲು ಚನ್ನರಾಯಪಟ್ಟಣ ಹೋಬಳಿ ನಲ್ಲೂರು, ಗಂಗವಾರ ಚೌಡಪ್ಪನಹಳ್ಳಿ, ಬೂದಿಗೆರೆ ಗ್ರಾಮ ಪಂಚಾಯಿತಿಗಳಿಗೆ ಸೇರುವ ಹಾಲು ಉತ್ಪಾದಕರ ಸಹಕಾರ ಸಂಘದವರು ಬೆಂಗಳೂರು ಪೂರ್ವ ತಾಲ್ಲೂಕಿನ ಬಮೂಲ್ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳನ್ನು ಒದಗಿಸಿ ಪಡೆಯಬಹುದಾಗಿದೆ ಎಂದರು.</p>.<p>ರೈತರ ಅಭಿವೃದ್ಧಿಗೆ ಪೂರಕವಾದ ಸಾಕಷ್ಟು ಸೌಲಭ್ಯಗಳನ್ನು ಸಹಕಾರಿ ಸಂಘಗಳ ಮುಖಾಂತರ ಪಡೆದುಕೊಳ್ಳಬಹುದು. ಈ ಬಗ್ಗೆ ಎಲ್ಲ ಹಾಲು ಉತ್ಪಾದಕರಿಗೆ ಮಾಹಿತಿ ಒದಗಿಸಬೇಕು ಎಂದರು. ಸೋಮತ್ತನಹಳ್ಳಿ ಡೇರಿ ಮುಖಂಡ ಗಂಗಾಧರ್, ಒಕ್ಕೂಟದ ಉಪವ್ಯವಸ್ಥಾಪಕ ಡಾ.ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>