ಅವರು ಈ ಬಗ್ಗೆ ಮಾಹಿತಿ ನೀಡಿ, ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಗೆ ಬಿಬಿಎಂಪಿ ಕಸ ತಂದು ಸುರಿಯುತ್ತಿರುವುದರಿಂದ ಈ ಭಾಗದ ಜನರ ಬದಕು ನರಕಮಯವಾಗಿದೆ. ಇದರ ವಿರುದ್ಧ ಸಾಕಷ್ಟು ಹೋರಾಟ ನಡೆಸುತ್ತಲೇ ಬರುತ್ತಿದ್ದರೂ ಕೂಡ ಕಸ ಬರುವುದು ಮಾತ್ರ ನಿಂತಿಲ್ಲ. ಇಂತಹ ಕಷ್ಟವನ್ನು ತಾಲ್ಲೂಕಿನ ಜನರು ಅನುಭವಿಸುತ್ತಿರುವಾಗಲೇ ವಿದೇಶಗಳಲ್ಲಿ ಇರುವ ರಾಜ್ಯದ ಜನರನ್ನು ಕರೆತಂದು ತಾಲ್ಲೂಕಿನ ಸಮುದಾಯ ಭವನ, ಆಸ್ಪತ್ರೆ, ಕಲ್ಯಾಣ ಮಂದಿರಗಳಲ್ಲಿ 14 ದಿನಗಳ ಕ್ವಾರಂಟೈನ್ ಮಾಡುತ್ತಿರುವುದು ಖಂಡನೀಯ. ತಾಲ್ಲೂಕಿನ ಜನರನ್ನು ಮಾತ್ರ ಇಲ್ಲಿ ಕ್ವಾರಂಟೈನ್ ಮಾಡಬೇಕು. ಇತರ ಜಿಲ್ಲೆ ಜನರನ್ನು ಅವರ ಜಿಲ್ಲೆ, ತಾಲ್ಲೂಕುಗಳಿಗೆ ಕಳುಹಿಸಿ ಅಲ್ಲಿಯೇ ಕ್ವಾರಂಟೈನ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.