<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ 2024-25ನೇ ಸಾಲಿನಲ್ಲಿ ₹46.34 ಲಕ್ಷ ಲಾಭಗಳಿಸಿದೆ. </p>.<p>ನಗರದ ಒಕ್ಕಲಿಗರ ಸಂಘದಲ್ಲಿ ಗುರುವಾರ ನಡೆದ ಸದಸ್ಯರ ವಾರ್ಷಿಕ ಸಭೆಯಲ್ಲಿ ಲೆಕ್ಕಪತ್ರ ಮಂಡಿಸಿ ಮಾತನಾಡಿದ ಪ್ರಭಾರ ಕಾರ್ಯದರ್ಶಿ ಕೆ.ಆನಂದ, ರಸಗೊಬ್ಬರವನ್ನು ಮಾರಾಟ ಮಾಡುವಲ್ಲಿ ಇಡೀ ಜಿಲ್ಲೆಯಲ್ಲೇ ಸಂಘವು ಪ್ರಥಮ ಸ್ಥಾನದಲ್ಲಿದೆ ಎಂದರು.</p>.<p>ನಗರದಲ್ಲಿ ಐದು ಜನತಾ ಬಜಾರ್ ಶಾಖೆ ತೆರೆಯಲಾಗಿದೆ. ಶೇ10ರಷ್ಟು ರಿಯಾಯಿತಿ ದರದಲ್ಲಿ ಔಷಧಿ ಮಾರಾಟ ಮಾಡಲಾಗುತ್ತಿದೆ. ಕಡಿಮೆ ಬಡ್ಡಿದರದಲ್ಲಿ ರೈತರಿಗೆ ಆಭರಣ ಸಾಲ ನೀಡಲಾಗುತ್ತಿದೆ ಎಂದು ನಿರ್ದೇಶಕರಾದ ವಿ.ಆಂಜನೇಗೌಡ, ಎನ್.ರಂಗಪ್ಪ, ಚುಂಚೇಗೌಡ ಹೇಳಿದರು. </p>.<p>ಸಂಘದ ಸದಸ್ಯರ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ನಡೆಯಿತು. ಸಂಘದ ಅಧ್ಯಕ್ಷ ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಕೆ.ಸಿ.ಲಕ್ಷ್ಮೀನಾರಾಯಣ್, ನಿರ್ದೇಶಕರಾದ ಜಿ.ಮಾರೇಗೌಡ, ಡಿ.ಸಿದ್ದರಾಮಯ್ಯ, ಚಂದ್ರಕಲಾ, ಎಂ.ಗೋವಿಂದರಾಜು, ಎಸ್.ದಯಾನಂದ, ಲಕ್ಷ್ಮೀ, ಎಂ.ಆನಂದ, ಎ.ರಾಮಾಂಜಿನಪ್ಪ, ಎ.ಎನ್.ಹರೀಶ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ 2024-25ನೇ ಸಾಲಿನಲ್ಲಿ ₹46.34 ಲಕ್ಷ ಲಾಭಗಳಿಸಿದೆ. </p>.<p>ನಗರದ ಒಕ್ಕಲಿಗರ ಸಂಘದಲ್ಲಿ ಗುರುವಾರ ನಡೆದ ಸದಸ್ಯರ ವಾರ್ಷಿಕ ಸಭೆಯಲ್ಲಿ ಲೆಕ್ಕಪತ್ರ ಮಂಡಿಸಿ ಮಾತನಾಡಿದ ಪ್ರಭಾರ ಕಾರ್ಯದರ್ಶಿ ಕೆ.ಆನಂದ, ರಸಗೊಬ್ಬರವನ್ನು ಮಾರಾಟ ಮಾಡುವಲ್ಲಿ ಇಡೀ ಜಿಲ್ಲೆಯಲ್ಲೇ ಸಂಘವು ಪ್ರಥಮ ಸ್ಥಾನದಲ್ಲಿದೆ ಎಂದರು.</p>.<p>ನಗರದಲ್ಲಿ ಐದು ಜನತಾ ಬಜಾರ್ ಶಾಖೆ ತೆರೆಯಲಾಗಿದೆ. ಶೇ10ರಷ್ಟು ರಿಯಾಯಿತಿ ದರದಲ್ಲಿ ಔಷಧಿ ಮಾರಾಟ ಮಾಡಲಾಗುತ್ತಿದೆ. ಕಡಿಮೆ ಬಡ್ಡಿದರದಲ್ಲಿ ರೈತರಿಗೆ ಆಭರಣ ಸಾಲ ನೀಡಲಾಗುತ್ತಿದೆ ಎಂದು ನಿರ್ದೇಶಕರಾದ ವಿ.ಆಂಜನೇಗೌಡ, ಎನ್.ರಂಗಪ್ಪ, ಚುಂಚೇಗೌಡ ಹೇಳಿದರು. </p>.<p>ಸಂಘದ ಸದಸ್ಯರ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ನಡೆಯಿತು. ಸಂಘದ ಅಧ್ಯಕ್ಷ ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಕೆ.ಸಿ.ಲಕ್ಷ್ಮೀನಾರಾಯಣ್, ನಿರ್ದೇಶಕರಾದ ಜಿ.ಮಾರೇಗೌಡ, ಡಿ.ಸಿದ್ದರಾಮಯ್ಯ, ಚಂದ್ರಕಲಾ, ಎಂ.ಗೋವಿಂದರಾಜು, ಎಸ್.ದಯಾನಂದ, ಲಕ್ಷ್ಮೀ, ಎಂ.ಆನಂದ, ಎ.ರಾಮಾಂಜಿನಪ್ಪ, ಎ.ಎನ್.ಹರೀಶ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>