<p><strong>ತಾವರೆಕೆರೆ (ಹೊಸಕೋಟೆ):</strong> ಯಾವುದೇ ಪಕ್ಷ ಅಧಿಕಾರದಲ್ಲಿದ್ದಾಗ ಅವರು ಮಾಡಿದ ಅಭಿವೃದ್ಧಿ ಕಾಮಗಾರಿಗಳು ಮಾತ್ರವೇ ಶಾಶ್ವತ ಹೊರತು ಟೀಕೆಗಳು ಶಾಶ್ವತ ಅಲ್ಲ ಎಂದು ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷರಾದ ಟಿ.ಎಸ್ ರಾಜಶೇಖರ್ ಹೇಳಿದರು.</p>.<p>ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ 2021 ರಿಂದ 2026ನೇ ಸಾಲಿನಲ್ಲಿ ಚುನಾಯಿತ ಜನಪ್ರತಿನಿಧಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.</p>.<p>5 ವರ್ಷಗಳಲ್ಲಿ ಆಡಳಿತ ನಡೆಸಿದ ತಾವರೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ನಡುವಿನ ಹೊಂದಾಣಿಕೆಯ ಕಾರ್ಯವೈಖರಿ ಗ್ರಾಮಗಳ ಅಭಿವೃದ್ಧಿಗೆ ಕಾರಣವಾಗಿದೆ. ಆದ್ದರಿಂದಲೇ ತಾಲ್ಲೂಕಿನಲ್ಲಿ ತಾವರೆಕೆರೆ ಪಂಚಾಯಿತಿಗೆ ಗಾಂಧಿ ಗ್ರಾಮ ಪ್ರಶಸ್ತಿಗೆ ಭಾಜನವಾಗುವಂತೆ ಮಾಡಿದೆ ಎಂದರು.</p>.<p>ಪಿಡಿಒ ಮುನಿಗಂಗಯ್ಯ ಮಾತನಾಡಿ, ಸಹಾನುಭೂತಿ ಮತ್ತು ಸಹಕಾರ ಮನೋಭಾವ ಹೊಂದಿದ ಸದಸ್ಯರು ಆಯ್ಕೆಯಾಗಿದ್ದ ಕಾರಣಕ್ಕೆ 5 ವರ್ಷಗಳ ಒಮ್ಮತದ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಯಿತು ಎಂದರು.</p>.<p>ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿವಿ ರಾಜಶೇಖರ್ ಗೌಡ, ಪ್ರಿಯಾಂಕ ರಮೇಶ್, ರವಿಕುಮಾರ್, ಗಂಗಾಪುರ ಮಂಜುನಾಥ್, ಬಸವ ಪ್ರಕಾಶ್, ಪವಿತ್ರ ಮಂಜುನಾಥ್, ರಮೇಶ್, ದೇವರಾಜ್, ಅಶ್ವಿನಿ ದೇವರಾಜ್, ಸುಧಾಕರ್, ಮಂಜುನಾಥ್, ಬಚ್ಚೇಗೌಡ, ಭರತ್, ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರೆಕೆರೆ (ಹೊಸಕೋಟೆ):</strong> ಯಾವುದೇ ಪಕ್ಷ ಅಧಿಕಾರದಲ್ಲಿದ್ದಾಗ ಅವರು ಮಾಡಿದ ಅಭಿವೃದ್ಧಿ ಕಾಮಗಾರಿಗಳು ಮಾತ್ರವೇ ಶಾಶ್ವತ ಹೊರತು ಟೀಕೆಗಳು ಶಾಶ್ವತ ಅಲ್ಲ ಎಂದು ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷರಾದ ಟಿ.ಎಸ್ ರಾಜಶೇಖರ್ ಹೇಳಿದರು.</p>.<p>ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ 2021 ರಿಂದ 2026ನೇ ಸಾಲಿನಲ್ಲಿ ಚುನಾಯಿತ ಜನಪ್ರತಿನಿಧಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.</p>.<p>5 ವರ್ಷಗಳಲ್ಲಿ ಆಡಳಿತ ನಡೆಸಿದ ತಾವರೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ನಡುವಿನ ಹೊಂದಾಣಿಕೆಯ ಕಾರ್ಯವೈಖರಿ ಗ್ರಾಮಗಳ ಅಭಿವೃದ್ಧಿಗೆ ಕಾರಣವಾಗಿದೆ. ಆದ್ದರಿಂದಲೇ ತಾಲ್ಲೂಕಿನಲ್ಲಿ ತಾವರೆಕೆರೆ ಪಂಚಾಯಿತಿಗೆ ಗಾಂಧಿ ಗ್ರಾಮ ಪ್ರಶಸ್ತಿಗೆ ಭಾಜನವಾಗುವಂತೆ ಮಾಡಿದೆ ಎಂದರು.</p>.<p>ಪಿಡಿಒ ಮುನಿಗಂಗಯ್ಯ ಮಾತನಾಡಿ, ಸಹಾನುಭೂತಿ ಮತ್ತು ಸಹಕಾರ ಮನೋಭಾವ ಹೊಂದಿದ ಸದಸ್ಯರು ಆಯ್ಕೆಯಾಗಿದ್ದ ಕಾರಣಕ್ಕೆ 5 ವರ್ಷಗಳ ಒಮ್ಮತದ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಯಿತು ಎಂದರು.</p>.<p>ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿವಿ ರಾಜಶೇಖರ್ ಗೌಡ, ಪ್ರಿಯಾಂಕ ರಮೇಶ್, ರವಿಕುಮಾರ್, ಗಂಗಾಪುರ ಮಂಜುನಾಥ್, ಬಸವ ಪ್ರಕಾಶ್, ಪವಿತ್ರ ಮಂಜುನಾಥ್, ರಮೇಶ್, ದೇವರಾಜ್, ಅಶ್ವಿನಿ ದೇವರಾಜ್, ಸುಧಾಕರ್, ಮಂಜುನಾಥ್, ಬಚ್ಚೇಗೌಡ, ಭರತ್, ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>