<p>ತಾವರೆಕೆರೆ(ಹೊಸಕೋಟೆ): ಗ್ರಾಮದಲ್ಲಿ ಎರಡು ದಿನಗಳಿಂದ ನಡೆದ ಇತಿಹಾಸ ಪ್ರಸಿದ್ಧ ಬಸವೇಶ್ವರಸ್ವಾಮಿ ಜಯಂತ್ಯುತ್ಸವ ಭಾನುವಾರ ಮುಕ್ತಾಯವಾಯಿತು.</p>.<p>ವಿಜಯಪುರ ಜಿಲ್ಲೆಯ ಬಸವಕಲ್ಯಾಣ ಮಠದ ಪೀಠಾಧಿಪತಿ ಮಹದೇವಸ್ವಾಮಿ ಹಾಗೂ ನಾಗಲಾಪುರ ಸಂಸ್ಥಾನ ಮಠದ ಪೀಠಾಧಿಪತಿ ತೇಜೇಶಲಿಂಗ ಶಿವಾಚಾರ್ಯಸ್ವಾಮಿ ಅವರನ್ನು ಪಲ್ಲಕಿಯಲ್ಲಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.</p>.<p>ಪಲ್ಲಕ್ಕಿ ಯೊಂದಿಗೆ ಬಸವೇಶ್ವರಸ್ವಾಮಿಯ ಉತ್ಸವವು ವೀರಗಾಸೆಯ ನೃತ್ಯ ಹಾಗೂ ವಾದ್ಯಗೋಷ್ಠಿಯೊಂದಿಗೆ ಅಗ್ನಿಕೊಂಡ ಪ್ರವೇಶಿಸಿತು. ನಂತರ ವೀರಶೈವ ಲಿಂಗಾಯತ ಸಮುದಾಯದವರಿಂದ ದೀಪಾರತಿ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.</p>.<p>ದೇವಾಲಯದ ಪ್ರಧಾನ ಅರ್ಚಕ ಬಸವ ಆರಾಧ್ಯಸ್ವಾಮಿ, ತಾವರೆಕೆರೆ ಬಸವ ಸೇವಾ ಸಮಿತಿಯ ಪದಾಧಿಕಾರಿಗಳು ಗ್ರಾಮಸ್ಥರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಕುಟುಂಬಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-15-2111002834</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾವರೆಕೆರೆ(ಹೊಸಕೋಟೆ): ಗ್ರಾಮದಲ್ಲಿ ಎರಡು ದಿನಗಳಿಂದ ನಡೆದ ಇತಿಹಾಸ ಪ್ರಸಿದ್ಧ ಬಸವೇಶ್ವರಸ್ವಾಮಿ ಜಯಂತ್ಯುತ್ಸವ ಭಾನುವಾರ ಮುಕ್ತಾಯವಾಯಿತು.</p>.<p>ವಿಜಯಪುರ ಜಿಲ್ಲೆಯ ಬಸವಕಲ್ಯಾಣ ಮಠದ ಪೀಠಾಧಿಪತಿ ಮಹದೇವಸ್ವಾಮಿ ಹಾಗೂ ನಾಗಲಾಪುರ ಸಂಸ್ಥಾನ ಮಠದ ಪೀಠಾಧಿಪತಿ ತೇಜೇಶಲಿಂಗ ಶಿವಾಚಾರ್ಯಸ್ವಾಮಿ ಅವರನ್ನು ಪಲ್ಲಕಿಯಲ್ಲಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.</p>.<p>ಪಲ್ಲಕ್ಕಿ ಯೊಂದಿಗೆ ಬಸವೇಶ್ವರಸ್ವಾಮಿಯ ಉತ್ಸವವು ವೀರಗಾಸೆಯ ನೃತ್ಯ ಹಾಗೂ ವಾದ್ಯಗೋಷ್ಠಿಯೊಂದಿಗೆ ಅಗ್ನಿಕೊಂಡ ಪ್ರವೇಶಿಸಿತು. ನಂತರ ವೀರಶೈವ ಲಿಂಗಾಯತ ಸಮುದಾಯದವರಿಂದ ದೀಪಾರತಿ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.</p>.<p>ದೇವಾಲಯದ ಪ್ರಧಾನ ಅರ್ಚಕ ಬಸವ ಆರಾಧ್ಯಸ್ವಾಮಿ, ತಾವರೆಕೆರೆ ಬಸವ ಸೇವಾ ಸಮಿತಿಯ ಪದಾಧಿಕಾರಿಗಳು ಗ್ರಾಮಸ್ಥರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಕುಟುಂಬಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-15-2111002834</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>