<p><strong>ತಾವರೆಕೆರೆ(ಹೊಸಕೋಟೆ):</strong> ರಾಮೇಶ್ವರ ದೇವಾಲಯ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ಶಾಸಕ ಶರತ್ ಬಚ್ಚೇಗೌಡ ಚಾನೆ ನೀಡಿದರು.</p>.<p>ರಾಮೇಶ್ವರ ದೇವಾಲಯದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ದೊಡ್ಡದೇವರ ಜಾತ್ರೆ ನಡೆಯುತ್ತದೆ. ಈ ವರ್ಷ ಮಾರ್ಚ್ 28 ರಿಂದ ಏಪ್ರಿಲ್ 5 ರವರೆಗೆ ನಡೆಯುವ ದೊಡ್ಡದೇವರ ಜಾತ್ರೆಗೆ 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಜಾತ್ರೆಗೆ ಬರುವವರ ಪ್ರಯಾಣ ಉತ್ತಮವಾಗಿರಲಿ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗಲೆಂದು ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ದೇವಾಲಯಕ್ಕೆ ತೆರಳಲು ಸಮರ್ಪಕ ರಸ್ತೆ ಇಲ್ಲದ ಕಾರಣ ಶಾಸಕರ ಅನುದಾನ ಹಾಗೂ ಪಂಚಾಯಿತಿ ಅನುದಾನದಡಿ ₹75 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಕಾಲುವೆ ಕಾಮಗಾರಿ ನಡೆಸಲಾಗುತ್ತಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವಿ.ರಾಜಶೇಖರ್ಗೌಡ, ಟಿ.ಎಸ್.ರಾಜಶೇಖರ್, ಮಾಜಿ ಗ್ರಾ.ಪಂ ಅಧ್ಯಕ್ಷರಾದ ಆರ್.ರವಿಕುಮಾರ್, ಕಸ್ತೂರಿ ನಂಜಪ್ಪ, ಪಿಡಿಒ ಮುನಿಗಂಗಯ್ಯ, ಎಪಿಎಂಸಿ ಅಧ್ಯಕ್ಷ ದೇವರಾಜ್, ಮುಖಂಡರಾದ ಗುರುಬಸಪ್ಪ, ಬಾಣಮಕಾನಹಳ್ಳಿ ರಮೇಶ್, ಮಂದೀಪ್ಗೌಡ, ಗಡಿಗೇನಹಳ್ಳಿ ನಂಜಪ್ಪ, ಆರ್.ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರೆಕೆರೆ(ಹೊಸಕೋಟೆ):</strong> ರಾಮೇಶ್ವರ ದೇವಾಲಯ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ಶಾಸಕ ಶರತ್ ಬಚ್ಚೇಗೌಡ ಚಾನೆ ನೀಡಿದರು.</p>.<p>ರಾಮೇಶ್ವರ ದೇವಾಲಯದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ದೊಡ್ಡದೇವರ ಜಾತ್ರೆ ನಡೆಯುತ್ತದೆ. ಈ ವರ್ಷ ಮಾರ್ಚ್ 28 ರಿಂದ ಏಪ್ರಿಲ್ 5 ರವರೆಗೆ ನಡೆಯುವ ದೊಡ್ಡದೇವರ ಜಾತ್ರೆಗೆ 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಜಾತ್ರೆಗೆ ಬರುವವರ ಪ್ರಯಾಣ ಉತ್ತಮವಾಗಿರಲಿ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗಲೆಂದು ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ದೇವಾಲಯಕ್ಕೆ ತೆರಳಲು ಸಮರ್ಪಕ ರಸ್ತೆ ಇಲ್ಲದ ಕಾರಣ ಶಾಸಕರ ಅನುದಾನ ಹಾಗೂ ಪಂಚಾಯಿತಿ ಅನುದಾನದಡಿ ₹75 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಕಾಲುವೆ ಕಾಮಗಾರಿ ನಡೆಸಲಾಗುತ್ತಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವಿ.ರಾಜಶೇಖರ್ಗೌಡ, ಟಿ.ಎಸ್.ರಾಜಶೇಖರ್, ಮಾಜಿ ಗ್ರಾ.ಪಂ ಅಧ್ಯಕ್ಷರಾದ ಆರ್.ರವಿಕುಮಾರ್, ಕಸ್ತೂರಿ ನಂಜಪ್ಪ, ಪಿಡಿಒ ಮುನಿಗಂಗಯ್ಯ, ಎಪಿಎಂಸಿ ಅಧ್ಯಕ್ಷ ದೇವರಾಜ್, ಮುಖಂಡರಾದ ಗುರುಬಸಪ್ಪ, ಬಾಣಮಕಾನಹಳ್ಳಿ ರಮೇಶ್, ಮಂದೀಪ್ಗೌಡ, ಗಡಿಗೇನಹಳ್ಳಿ ನಂಜಪ್ಪ, ಆರ್.ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>