ಜೇಸಿಸ್ ಸಂಸ್ಥೆಯ ಅಧ್ಯಕ್ಷ ಆರ್.ಸಿ.ಮಂಜುನಾಥ್ ಮಾತನಾಡಿ, ‘ವಿದ್ಯೆಯ ಆರಂಭವೇ ಒಂದು ಉತ್ತಮ ಸಂಸ್ಕಾರ. ಈ ಸಂಸ್ಕಾರವು ಬಹಳ ಪೂರ್ವದಿಂದಲೂ ಚೂಡಾಕರ್ಮದೊಡನೆಯೇ ಮಾಡುತ್ತಿದ್ದರು. ವಾಲ್ಮೀಕಿ ಮಹರ್ಷಿಗಳು ಲವ-ಕುಶರಿಗೆ ಚೂಡಾಕರ್ಮವಾದ ಮೇಲೆ ವಿದ್ಯಾರಂಭ ಮಾಡಿಸಿದರು. ಶಾಸ್ತ್ರದ ಪ್ರಕಾರ ಮಕ್ಕಳಿಗೆ ಐದನೇ ವರ್ಷ, ಐದನೇ ತಿಂಗಳ, ಐದನೇ ದಿನ ಅಕ್ಷರಾಭ್ಯಾಸ ಮಾಡಬೇಕು. ಈಗಿನ ಮಕ್ಕಳು ಈ ವೇಳೆಗಾಗಲೇ ಶಾಲೆಗೆ ಹೋಗುತ್ತಿರುತ್ತಾರೆ. ಆದ್ದರಿಂದ ಅವರ ಬೆಳವಣಿಗೆ ಮತ್ತು ಬುದ್ಧಿ ತಿಳಿಸುವ ಇದಕ್ಕೆ ಮುಂಚೆಯೇ ಅಕ್ಷರಾಭ್ಯಾಸ ಪ್ರಾರಂಭಿಸುವುದು ಉತ್ತಮವಾದ ಬೆಳವಣಿಗೆ. ಪೋಷಕರು ಮಕ್ಕಳ ಕುರಿತು ಹೆಚ್ಚು ಕಾಳಜಿ ವಹಿಸಬೇಕು ಎಂದರು.