<p><strong>ವಿಜಯಪುರ (ಬೆಂ.ಗ್ರಾಮಾಂತರ):</strong>ಪಟ್ಟಣದ ಮೌಲಾನ ಆಜಾದ್ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳು ಶಿಕ್ಷಕರ ದಿನ ಆಚರಿಸಿದರು.</p>.<p>ಕವ್ವಾಲಿ ಹಾಡಿ ಶಿಕ್ಷಕರಿಗೆ ಶುಭಾಶಯ ಕೋರಿದರು. ವಿವಿಧ ಬಗೆಯ ಹಾಡುಗಳಿಗೆ ನೃತ್ಯ ಮಾಡಿ ರಂಜಿಸಿದರು. ಶಿಕ್ಷಕರ ಕುರಿತು ಮೆಚ್ಚುಗೆಯ ಮಾತುಗಳನ್ನು ಹಾಡಿದ ವಿದ್ಯಾರ್ಥಿಗಳು ತರಗತಿಯಲ್ಲಿ ಅವರು ಹೇಗೆ ಪಾಠ ಮಾಡುತ್ತಾರೆ ಎನ್ನುವುದನ್ನು ಮಿಮಿಕ್ರಿ ಮಾಡಿದರು.</p>.<p>ಮುಖ್ಯಶಿಕ್ಷಕಿ ಪ್ರಿಯದರ್ಶಿನಿ ಮಾತನಾಡಿ, ಸರ್ವೆಪಲ್ಲಿ ರಾಧಾಕೃಷ್ಣನ್ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಣ, ತತ್ವಜ್ಞಾನ, ದೇಶದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅದಕ್ಕಾಗಿಯೇ ಅವರು ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ. ಅವರ ಜನ್ಮ ದಿನವಾದ ಸೆ. 5ರಂದು ಪ್ರತಿವರ್ಷ ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>ಸಹಶಿಕ್ಷಕರಾದ ಸುನೀತಾ, ಗಂಗಾಧರ್, ಭವ್ಯ, ವಿಜಯಕುಮಾರ್, ನೂರ್ ಆಯೇಷಾ, ಪರ್ಹಾನಾ ತಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ಬೆಂ.ಗ್ರಾಮಾಂತರ):</strong>ಪಟ್ಟಣದ ಮೌಲಾನ ಆಜಾದ್ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳು ಶಿಕ್ಷಕರ ದಿನ ಆಚರಿಸಿದರು.</p>.<p>ಕವ್ವಾಲಿ ಹಾಡಿ ಶಿಕ್ಷಕರಿಗೆ ಶುಭಾಶಯ ಕೋರಿದರು. ವಿವಿಧ ಬಗೆಯ ಹಾಡುಗಳಿಗೆ ನೃತ್ಯ ಮಾಡಿ ರಂಜಿಸಿದರು. ಶಿಕ್ಷಕರ ಕುರಿತು ಮೆಚ್ಚುಗೆಯ ಮಾತುಗಳನ್ನು ಹಾಡಿದ ವಿದ್ಯಾರ್ಥಿಗಳು ತರಗತಿಯಲ್ಲಿ ಅವರು ಹೇಗೆ ಪಾಠ ಮಾಡುತ್ತಾರೆ ಎನ್ನುವುದನ್ನು ಮಿಮಿಕ್ರಿ ಮಾಡಿದರು.</p>.<p>ಮುಖ್ಯಶಿಕ್ಷಕಿ ಪ್ರಿಯದರ್ಶಿನಿ ಮಾತನಾಡಿ, ಸರ್ವೆಪಲ್ಲಿ ರಾಧಾಕೃಷ್ಣನ್ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಣ, ತತ್ವಜ್ಞಾನ, ದೇಶದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅದಕ್ಕಾಗಿಯೇ ಅವರು ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ. ಅವರ ಜನ್ಮ ದಿನವಾದ ಸೆ. 5ರಂದು ಪ್ರತಿವರ್ಷ ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>ಸಹಶಿಕ್ಷಕರಾದ ಸುನೀತಾ, ಗಂಗಾಧರ್, ಭವ್ಯ, ವಿಜಯಕುಮಾರ್, ನೂರ್ ಆಯೇಷಾ, ಪರ್ಹಾನಾ ತಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>