ಮುಖ್ಯಶಿಕ್ಷಕಿ ಪ್ರಿಯದರ್ಶಿನಿ ಮಾತನಾಡಿ, ಸರ್ವೆಪಲ್ಲಿ ರಾಧಾಕೃಷ್ಣನ್ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಣ, ತತ್ವಜ್ಞಾನ, ದೇಶದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅದಕ್ಕಾಗಿಯೇ ಅವರು ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ. ಅವರ ಜನ್ಮ ದಿನವಾದ ಸೆ. 5ರಂದು ಪ್ರತಿವರ್ಷ ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.