<p><strong>ವಿಜಯಪುರ: </strong>ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲು ಎಲ್ಲ ಶಾಲಾ ಕಾಲೇಜುಗಳು, ಅಧಿಕಾರಿಗಳು, ಜನರ ಸಹಕಾರ ಅಗತ್ಯವಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಹೇಳಿದರು.</p>.<p>ಇಲ್ಲಿನ ಯೋಜ್ಗಾರ್ ಕಚೇರಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರೀಯ ಹಬ್ಬ ಆಚರಿಸಲು ಪ್ರತಿಯೊಬ್ಬರು ಬದ್ಧರಾಗಬೇಕು. ಇತ್ತೀಚೆಗೆ ರಾಷ್ಟ್ರೀಯ ಹಬ್ಬಗಳು, ರಾಷ್ಟ್ರಗೀತೆ, ರಾಷ್ಟ್ರಧ್ವಜಗಳ ಮಹತ್ವವನ್ನು ಯುವಜನರು ಮರೆಯುತ್ತಿದ್ದಾರೆ. ಅವರನ್ನು ನಾವು ಜಾಗೃತರನ್ನಾಗಿ ಮಾಡಬೇಕು’ ಎಂದು ಹೇಳಿದರು.</p>.<p>ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯ ದಿನಾಚರಣೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಪಥ ಸಂಚಲನದಲ್ಲಿ ಭಾಗವಹಿಸುವ ಖಾಸಗಿ ಶಾಲೆಯ ಮಕ್ಕಳು ಹೊರತು ಪಡಿಸಿದರೆ,ಖಾಸಗಿ ಶಾಲೆಗಳು, ಕಾಲೇಜುಗಳ ಒಬ್ಬ ವಿದ್ಯಾರ್ಥಿಯೂ ಭಾಗವಹಿಸುವುದಿಲ್ಲ. ಅವರೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಾಗಬೇಕು ಎಂದರು.</p>.<p>ಬೆಳಿಗ್ಗೆ 8ಕ್ಕೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಜತೆ ಶಿಕ್ಷಕರು ಶಾಲಾ ಮೈದಾನಕ್ಕೆ ಬರಬೇಕು. 9ಕ್ಕೆ ಧ್ಜಜಾರೋಹಣದ ನಂತರ ವಿದ್ಯಾರ್ಥಿಗಳಿಂದ ಪಥ ಸಂಚಲನ ಮಾಡಲಾಗುವುದು. ಅತಿಥಿಗಳ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.</p>.<p>ಪುರಸಭಾ ವ್ಯವಸ್ಥಾಪಕ ಆಂಜನೇಯಲು, ಕಂದಾಯ ಅಧಿಕಾರಿ ಜಯಕಿರಣ್, ಆರೋಗ್ಯ ಎಂಜಿನಿಯರ್ ಮಹೇಶ್ಕುಮಾರ್, ಸಹಾಯಕ ಆರೋಗ್ಯ ಎಂಜಿನಿಯರ್ ಪ್ರಭಾವತಿ, ಸರಸ್ವತಮ್ಮ, ಮಂಜುನಾಥ್, ಜನಾರ್ಧನ್, ಮೂರ್ತಿ, ಶಿವನಾಗೇಗೌಡ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲು ಎಲ್ಲ ಶಾಲಾ ಕಾಲೇಜುಗಳು, ಅಧಿಕಾರಿಗಳು, ಜನರ ಸಹಕಾರ ಅಗತ್ಯವಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಹೇಳಿದರು.</p>.<p>ಇಲ್ಲಿನ ಯೋಜ್ಗಾರ್ ಕಚೇರಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರೀಯ ಹಬ್ಬ ಆಚರಿಸಲು ಪ್ರತಿಯೊಬ್ಬರು ಬದ್ಧರಾಗಬೇಕು. ಇತ್ತೀಚೆಗೆ ರಾಷ್ಟ್ರೀಯ ಹಬ್ಬಗಳು, ರಾಷ್ಟ್ರಗೀತೆ, ರಾಷ್ಟ್ರಧ್ವಜಗಳ ಮಹತ್ವವನ್ನು ಯುವಜನರು ಮರೆಯುತ್ತಿದ್ದಾರೆ. ಅವರನ್ನು ನಾವು ಜಾಗೃತರನ್ನಾಗಿ ಮಾಡಬೇಕು’ ಎಂದು ಹೇಳಿದರು.</p>.<p>ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯ ದಿನಾಚರಣೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಪಥ ಸಂಚಲನದಲ್ಲಿ ಭಾಗವಹಿಸುವ ಖಾಸಗಿ ಶಾಲೆಯ ಮಕ್ಕಳು ಹೊರತು ಪಡಿಸಿದರೆ,ಖಾಸಗಿ ಶಾಲೆಗಳು, ಕಾಲೇಜುಗಳ ಒಬ್ಬ ವಿದ್ಯಾರ್ಥಿಯೂ ಭಾಗವಹಿಸುವುದಿಲ್ಲ. ಅವರೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಾಗಬೇಕು ಎಂದರು.</p>.<p>ಬೆಳಿಗ್ಗೆ 8ಕ್ಕೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಜತೆ ಶಿಕ್ಷಕರು ಶಾಲಾ ಮೈದಾನಕ್ಕೆ ಬರಬೇಕು. 9ಕ್ಕೆ ಧ್ಜಜಾರೋಹಣದ ನಂತರ ವಿದ್ಯಾರ್ಥಿಗಳಿಂದ ಪಥ ಸಂಚಲನ ಮಾಡಲಾಗುವುದು. ಅತಿಥಿಗಳ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.</p>.<p>ಪುರಸಭಾ ವ್ಯವಸ್ಥಾಪಕ ಆಂಜನೇಯಲು, ಕಂದಾಯ ಅಧಿಕಾರಿ ಜಯಕಿರಣ್, ಆರೋಗ್ಯ ಎಂಜಿನಿಯರ್ ಮಹೇಶ್ಕುಮಾರ್, ಸಹಾಯಕ ಆರೋಗ್ಯ ಎಂಜಿನಿಯರ್ ಪ್ರಭಾವತಿ, ಸರಸ್ವತಮ್ಮ, ಮಂಜುನಾಥ್, ಜನಾರ್ಧನ್, ಮೂರ್ತಿ, ಶಿವನಾಗೇಗೌಡ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>