ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಮೊದಲ ಶನಿವಾರದ ಅಂಗವಾಗಿ ತಾಲ್ಲೂಕಿನ ಕನಸವಾಡಿ ಶನಿಮಹಾತ್ಮಸ್ವಾಮಿ ದೇವಾಲಯಕ್ಕೆ ಶನಿವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಂಪತಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕೊರೊನಾ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಜಿಲ್ಲಾಡಳಿತ ಸೆ.7ರವರೆಗೂ ಮುಜರಾಯಿ ಹಾಗೂ ಖಾಸಗಿ ದೇವಾಲಯಗಳನ್ನು ಸರ್ಕಾರಿ ರಜಾ ದಿನ ಹಾಗೂ ಶನಿವಾರ, ಭಾನುವಾರ ಬಂದ್ ಮಾಡುವಂತೆ ಆದೇಶ ಮಾಡಿದೆ. ಹೀಗಾಗಿ ಮುಂಜಾನೆಯೇ ದೇವಾಲಯಕ್ಕೆ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.