ಕನಸವಾಡಿ: ಶನಿಮಹಾತ್ಮ ದೇವಾಲಯದಲ್ಲಿ ಬೆಳಿಗ್ಗೆ 8 ಗಂಟೆಯಿಂದಲೆ ದೇವರ ದರ್ಶನಕ್ಕೆ ಭಕ್ತಾದಿಗಳು ಸಾಲುಗಟ್ಟಿ ನಿಂತು ಪೂಜೆ ಸಲ್ಲಿಸಿದರು. ಬೆಂಗಳೂರು, ನೆಲಮಂಗಲ ಭಾಗಗಳಿಂದಲೂ ಭಕ್ತರು ಆಗಮಿಸಿದ್ದರು. ಸರ್ಕಾರದ ನಿಯಮಗಳನ್ನು ಪಾಲಿಸುವಂತೆ, ಅಂತರ ಕಾಪಾಡುವಂತೆ ತಿಳಿಸಲಾಗುತ್ತಿತ್ತು. ಅನ್ನದಾಸೋಹ ಭವನದಲ್ಲಿ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.