ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋನಿಗೆ ಬಿದ್ದ ಕರಡಿ: ನಿಟ್ಟುಸಿರು ಬಿಟ್ಟ ಜನ

Published 28 ಸೆಪ್ಟೆಂಬರ್ 2023, 16:13 IST
Last Updated 28 ಸೆಪ್ಟೆಂಬರ್ 2023, 16:13 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ಬುಗಡಿಹಳ್ಳಿ ಸುತ್ತಮುತ್ತ ಗ್ರಾಮಗಳಲ್ಲಿ ಓಡಾಡುತ್ತಾ ಜನರಲ್ಲಿ ಭಯ ಮೂಡಿಸಿದ್ದ ಕರಡಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬುಧವಾರ ರಾತ್ರಿ ಬಿದ್ದಿದೆ.‌

ಎರಡು ತಿಂಗಳಿಂದ ನರಸೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನೋಹಳ್ಳಿ, ಜಾಜೂರು, ಲಕ್ಷ್ಮೀಪುರ, ಬುಗಡಿಹಳ್ಳಿ, ಗೊಲ್ಲರಹಟ್ಟಿ, ಸುತ್ತಮುತ್ತಲ ಗ್ರಾಮಗಳಲ್ಲಿ ರಾತ್ರಿ ತಿರುಗಾಡುತ್ತಿತ್ತು. ಇದರಿಂದ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದರು. 

ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಅರಣ್ಯಾಧಿಕಾರಿಗಳು ಕರಡಿಯನ್ನು ಹಿಡಿಯಲು ಬುಗಡಿಹಳ್ಳಿಯ ವಸಂತ್ ಎಂಬುವವರ ಸೀಬೆ ತೋಟದಲ್ಲಿ ಬೋನು ಇಟ್ಟಿದ್ದರು.   ಹಣ್ಣನ್ನು ತಿನ್ನಲು ಬಂದ ಕರಡಿ ಬೋನಿಗೆ ಬಿದ್ದಿದೆ.

ಜನರು ತಂಡೋಪತಂಡವಾಗಿ ಬಂದು ಕರಡಿಯನ್ನು ಕುತೂಹಲದಿಂದ ವೀಕ್ಷಿಸಿದರು.  ಬೋನಿಗೆ ಬಿದ್ದ ಕರಡಿಯನ್ನು ಹೊಸಪೇಟೆಗೆ ತೆಗೆದುಕೊಂಡು ಹೋಗಿ ಬಿಟ್ಟು ಬರಲಾಗಿದೆ ಎಂದು ಅರಣ್ಯಾಧಿಕಾರಿ ಶ್ರೀಧರ್ ತಿಳಿಸಿದ್ದಾರೆ.      

ಬೋನಿಗೆ ಬಿದ್ದಿರುವ ಕರಡಿ
ಬೋನಿಗೆ ಬಿದ್ದಿರುವ ಕರಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT