ವಿಜಯಪುರ: ಹೋಬಳಿ ಯ ಕೋರ ಮಂಗಲ ಗ್ರಾಮ ಸಮೀಪದ ಕುರುಲುಕುಂಟೆ ರಸ್ತೆಯಲ್ಲಿ ಗುರುವಾರ ಹಿಪ್ಪುನೇರಳೆ ಸೊಪ್ಪು ಕೊಯ್ಯಲು ಹೋಗಿದ್ದ ಪಿಳ್ಳೇಗೌಡ(65) ಅವರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ. ವಿಜಯಪುರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಕೋರಮಂಗಲ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.