ತೂಬಗೆರೆ (ದೊಡ್ಡಬಳ್ಳಾಪುರ):ತಾಲ್ಲೂಕಿನ ಚಿಕ್ಕಮುದ್ದೇನಹಳ್ಳಿಯಲ್ಲಿ ನರೇಗಾ ಯೋಜನೆಯ ಕಾಮಗಾರಿ ಕುರಿತುಶನಿವಾರ ಎರಡು ಕುಟುಂಬಗಳ ನಡುವೆ ಆರಂಭವಾದ ಜಗಳ ವೃದ್ಧೆಯೊಬ್ಬರ ಸಾವಿನಲ್ಲಿ ಅಂತ್ಯವಾಗಿದೆ.
ಹೊಡೆದಾಟದಲ್ಲಿ ಗೌರಮ್ಮ (60) ಎಂಬುವರು ಮೃತಪಟ್ಟಿದ್ದಾರೆ. ಈ ಸಂಬಂಧ ಮೃತ ಮಹಿಳೆಯ ಸಂಬಂಧಿಗಳಾದ ಮಾರುತಿ, ಸುಧಾಕರ್ ಎಂಬುವರನ್ನು ಬಂಧಿಸಲಾಗಿದೆ.
ಶುಕ್ರವಾರ ಸಂಜೆ ನರೇಗಾ ಕಾಮಗಾರಿ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಜಗಳ ಬಿಡಿಸಲು ಮಧ್ಯೆ ಪ್ರವೇಶಿಸಿದ ಗೌರಮ್ಮ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ.
ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಸ್ಥಳಕ್ಕೆ ಭೇಟಿ ನೀಡಿಪರಿಶೀಲಿಸಿದರು.