<p><strong>ವಿಜಯಪುರ</strong>:ಭೂಮಿಯ ಮೇಲೆ ಬೆಟ್ಟ, ನದಿಗಳು ಇರುವವರೆಗೂ ರಾಮಾಯಣ ಪ್ರಚಾರಗೊಳ್ಳುತ್ತಲೇ ಇರುತ್ತದೆ ಎಂಬ ಮಾತು ಈ ಗ್ರಂಥದಲ್ಲಿಯೇ ಬಂದಿದೆ. ರಾಮಾಯಣ ಇರುವವರೆಗೂ ವಾಲ್ಮೀಕಿಯ ಹೆಸರೂ ಇರುತ್ತದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.</p>.<p>ಪಟ್ಟಣದ ಮಹರ್ಷಿ ವಾಲ್ಮೀಕಿ ಉದ್ಯಾನದಲ್ಲಿ ಬುಧವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಮಾಯಣದಲ್ಲಿ ವಾಲ್ಮೀಕಿ ಬರೆದ 24,000 ಶ್ಲೋಕಗಳು ಮತ್ತು ಏಳು ಖಂಡಗಳಿವೆ. ಇದು ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದರು.</p>.<p>ವಾಲ್ಮೀಕಿಯು ರಾಮಾಯಣದಲ್ಲಿ ಭರತ ಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ. ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯ ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ ಎಂದು ಹೇಳಿದರು.</p>.<p>ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶ ಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿಯನ್ನು ಕವಿಗಳ ಕವಿ ಎಂದು ಮಹಾಕವಿ ಕಾಳಿದಾಸ ಗೌರವಿಸಿದ್ದಾರೆ ಎಂದರು.</p>.<p>ಪುರಸಭಾ ಅಧ್ಯಕ್ಷೆ ರಾಜೇಶ್ವರಿ ಎಸ್. ಭಾಸ್ಕರ್ ಮಾತನಾಡಿ, ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಒಂದಾದ ರಾಮಾಯಣ ರಚಿಸಿದ ವಾಲ್ಮೀಕಿ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.</p>.<p>ಪುರಸಭಾ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್ ಮಾತನಾಡಿ, ಪ್ರಕೃತಿ ಸೌಂದರ್ಯ, ಬೆಟ್ಟಗುಡ್ಡ, ಪರ್ವತಗಳು ಸೇರಿದಂತೆ ಪ್ರತಿಯೊಂದು ಸ್ಥಳವನ್ನು ಒಂದು ಸ್ಥಳದಲ್ಲೇ ಕೂತು ಕರಾರುವಕ್ಕಾಗಿ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ವಾಲ್ಮೀಕಿ ಅವರು, ವಿಶ್ವಕ್ಕೆ ಸಂಸ್ಕೃತಿಯನ್ನು ಪಸರಿಸಿದ ಆದಿಕವಿಯಾಗಿದ್ದಾರೆ ಎಂದರು.</p>.<p>ಪುರಸಭಾ ಸದಸ್ಯ ಹನೀಪುಲ್ಲಾ ಮಾತನಾಡಿದರು.</p>.<p>ಪುರಸಭಾ ಉಪಾಧ್ಯಕ್ಷ ಎಂ. ಕೇಶವಪ್ಪ, ಸದಸ್ಯರಾದ ರಾಜಣ್ಣ, ರಾಮು, ರಾಧಮ್ಮ ಪ್ರಕಾಶ್, ಮಾಜಿ ಅಧ್ಯಕ್ಷೆ ಅನಸೂಯಮ್ಮ ಸಂಪತ್ ಕುಮಾರ್, ವಾಲ್ಮೀಕಿ ಸಂಘದ ಅಧ್ಯಕ್ಷ ಶ್ರೀರಾಮಪ್ಪ, ಮುಖಂಡರಾದ ಎನ್. ನಾರಾಯಣಸ್ವಾಮಿ, ಎಸ್. ಭಾಸ್ಕರ್, ರಮೇಶ್, ಗೋಪಾಲ್<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>:ಭೂಮಿಯ ಮೇಲೆ ಬೆಟ್ಟ, ನದಿಗಳು ಇರುವವರೆಗೂ ರಾಮಾಯಣ ಪ್ರಚಾರಗೊಳ್ಳುತ್ತಲೇ ಇರುತ್ತದೆ ಎಂಬ ಮಾತು ಈ ಗ್ರಂಥದಲ್ಲಿಯೇ ಬಂದಿದೆ. ರಾಮಾಯಣ ಇರುವವರೆಗೂ ವಾಲ್ಮೀಕಿಯ ಹೆಸರೂ ಇರುತ್ತದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.</p>.<p>ಪಟ್ಟಣದ ಮಹರ್ಷಿ ವಾಲ್ಮೀಕಿ ಉದ್ಯಾನದಲ್ಲಿ ಬುಧವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಮಾಯಣದಲ್ಲಿ ವಾಲ್ಮೀಕಿ ಬರೆದ 24,000 ಶ್ಲೋಕಗಳು ಮತ್ತು ಏಳು ಖಂಡಗಳಿವೆ. ಇದು ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದರು.</p>.<p>ವಾಲ್ಮೀಕಿಯು ರಾಮಾಯಣದಲ್ಲಿ ಭರತ ಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ. ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯ ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ ಎಂದು ಹೇಳಿದರು.</p>.<p>ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶ ಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿಯನ್ನು ಕವಿಗಳ ಕವಿ ಎಂದು ಮಹಾಕವಿ ಕಾಳಿದಾಸ ಗೌರವಿಸಿದ್ದಾರೆ ಎಂದರು.</p>.<p>ಪುರಸಭಾ ಅಧ್ಯಕ್ಷೆ ರಾಜೇಶ್ವರಿ ಎಸ್. ಭಾಸ್ಕರ್ ಮಾತನಾಡಿ, ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಒಂದಾದ ರಾಮಾಯಣ ರಚಿಸಿದ ವಾಲ್ಮೀಕಿ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.</p>.<p>ಪುರಸಭಾ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್ ಮಾತನಾಡಿ, ಪ್ರಕೃತಿ ಸೌಂದರ್ಯ, ಬೆಟ್ಟಗುಡ್ಡ, ಪರ್ವತಗಳು ಸೇರಿದಂತೆ ಪ್ರತಿಯೊಂದು ಸ್ಥಳವನ್ನು ಒಂದು ಸ್ಥಳದಲ್ಲೇ ಕೂತು ಕರಾರುವಕ್ಕಾಗಿ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ವಾಲ್ಮೀಕಿ ಅವರು, ವಿಶ್ವಕ್ಕೆ ಸಂಸ್ಕೃತಿಯನ್ನು ಪಸರಿಸಿದ ಆದಿಕವಿಯಾಗಿದ್ದಾರೆ ಎಂದರು.</p>.<p>ಪುರಸಭಾ ಸದಸ್ಯ ಹನೀಪುಲ್ಲಾ ಮಾತನಾಡಿದರು.</p>.<p>ಪುರಸಭಾ ಉಪಾಧ್ಯಕ್ಷ ಎಂ. ಕೇಶವಪ್ಪ, ಸದಸ್ಯರಾದ ರಾಜಣ್ಣ, ರಾಮು, ರಾಧಮ್ಮ ಪ್ರಕಾಶ್, ಮಾಜಿ ಅಧ್ಯಕ್ಷೆ ಅನಸೂಯಮ್ಮ ಸಂಪತ್ ಕುಮಾರ್, ವಾಲ್ಮೀಕಿ ಸಂಘದ ಅಧ್ಯಕ್ಷ ಶ್ರೀರಾಮಪ್ಪ, ಮುಖಂಡರಾದ ಎನ್. ನಾರಾಯಣಸ್ವಾಮಿ, ಎಸ್. ಭಾಸ್ಕರ್, ರಮೇಶ್, ಗೋಪಾಲ್<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>