ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಗೋದಾಮಿನಲ್ಲಿದ್ದ ವಸ್ತು ಭಸ್ಮ

Last Updated 8 ಆಗಸ್ಟ್ 2021, 4:39 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸಿಡಲಾಗಿದ್ದ ಗೋದಾಮಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.

ಬಾಶೆಟ್ಟಿಹಳ್ಳಿಯಲ್ಲಿಯೇ ತಾಲ್ಲೂಕಿನ ಅಗ್ನಿಶಾಮಕ ಠಾಣೆ ಇದೆ. ಆದರೆ, ಅಗ್ನಿಶಾಮಕ ವಾಹನ ಬೇರೆಡೆಗೆ ಹೋಗಿ ದ್ದರಿಂದ ಯಲಹಂಕ ಅಗ್ನಿಶಾಮಕ ಠಾಣೆಯಿಂದ ಲಾರಿ ಬಂದು ಬೆಂಕಿ ನಂದಿಸುವುದು ತಡವಾಗಿದೆ. ಹಾಗಾಗಿ, ಗೋದಾಮಿನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಹೋಗಿವೆ ಎನ್ನಲಾಗಿದೆ. ಅಗ್ನಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

1ನೇ ಹಂತದಲ್ಲಿದ್ದ ಬಹುತೇಕ ಕೈಗಾರಿಕೆಗಳು 2 ಮತ್ತು 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿನ ವಿಶಾಲವಾದ ಜಾಗಗಳಿಗೆ ಸ್ಥಳಾಂತರವಾಗುತ್ತಿವೆ. ಹೀಗಾಗಿ, ಇಲ್ಲಿನ ಬಹುತೇಕ ಕೈಗಾರಿಕೆಗಳ ಮಾಲೀಕರು ಹಳೇಯ ಕಟ್ಟಡಗಳನ್ನು ಗೋದಾಮುಗಳಾಗಿ ಬಳಸುತ್ತಿದ್ದಾರೆ. ಆದರೆ, ಅಗ್ನಿ ಅನಾಹುತ ನಡೆದಾಗ ಬೆಂಕಿ ನಂದಿಸುವ ಯಾವುದೇ ಮುನ್ನೆಚ್ಚರಿಕೆ ಕ್ರಮ ಪಾಲಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT