1ನೇ ಹಂತದಲ್ಲಿದ್ದ ಬಹುತೇಕ ಕೈಗಾರಿಕೆಗಳು 2 ಮತ್ತು 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿನ ವಿಶಾಲವಾದ ಜಾಗಗಳಿಗೆ ಸ್ಥಳಾಂತರವಾಗುತ್ತಿವೆ. ಹೀಗಾಗಿ, ಇಲ್ಲಿನ ಬಹುತೇಕ ಕೈಗಾರಿಕೆಗಳ ಮಾಲೀಕರು ಹಳೇಯ ಕಟ್ಟಡಗಳನ್ನು ಗೋದಾಮುಗಳಾಗಿ ಬಳಸುತ್ತಿದ್ದಾರೆ. ಆದರೆ, ಅಗ್ನಿ ಅನಾಹುತ ನಡೆದಾಗ ಬೆಂಕಿ ನಂದಿಸುವ ಯಾವುದೇ ಮುನ್ನೆಚ್ಚರಿಕೆ ಕ್ರಮ ಪಾಲಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.