ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಸಂಗ ಕಾರ್ಯಕ್ರಮ

Last Updated 13 ಅಕ್ಟೋಬರ್ 2020, 4:30 IST
ಅಕ್ಷರ ಗಾತ್ರ

ವಿಜಯಪುರ: ‘ಪ್ರತಿಯೊಬ್ಬರೂ ಪ್ರೀತಿ, ವಿಶ್ವಾಸದಿಂದ ಬದುಕುವುದನ್ನು ರೂಢಿಸಿಕೊಳ್ಳಬೇಕು’ ಎಂದು ಸತ್ಸಂಗದ ಅಧ್ಯಕ್ಷ ಜೆ.ಎಸ್. ರಾಮಚಂದ್ರಪ್ಪ ಸಲಹೆ ನೀಡಿದರು.

ಇಲ್ಲಿನ ರಾಯಲ್ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಕಲಿಯಬೇಕು. ಆಡಂಬರದ ಭಕ್ತಿಯಿಂದ ಯಾವುದೇ ಪ್ರಯೋಜನವಿಲ್ಲ. ಸತ್ಯದ ಹಾದಿಯಲ್ಲಿ ಸಾಗಬೇಕು. ಧರ್ಮದ ನಡೆಯಲ್ಲಿಯೇ ಪಯಣಿಸಬೇಕು. ಎಲ್ಲರಲ್ಲೂ ವಿವೇಚನಾ ಶಕ್ತಿ ಇದೆ. ಆದರೆ ಸಾವಿರಾರು ಬಗೆಯ ಮನಸ್ಸುಗಳ ನಡುವೆ ಹೊಂದಿಕೊಂಡು ಜೀವಿಸುವಾಗ ತಪ್ಪುಗಳು ಸಂಭವಿಸಬಹುದು. ಅಂತಹ ಸಂದರ್ಭದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡು ಸಮಚಿತ್ತದಿಂದ ವರ್ತಿಸಬೇಕಿದೆ’ ಎಂದರು.

‘ಸಮಚಿತ್ತದಿಂದ ಬದುಕಲು ಏಕಾಗ್ರತೆಯ ಅವಶ್ಯಕತೆಯಿದೆ. ಭಕ್ತಿಯೇ ಇದಕ್ಕೆ ಪೂರಕ ಸಾಧನ’ ಎಂದರು.

ಗೋಪಾಲಪ್ಪ ಮತ್ತು ಅರ್ಚಕ ರಮೇಶ್ ಸ್ವಾಮೀಜಿ ಮಾತನಾಡಿದರು. ಎಂ.ವಿ. ನಾಯ್ಡು, ಮಹಾತ್ಮಾಂಜನೇಯ, ನರಸಿಂಹಪ್ಪ, ನಾಗಯ್ಯ ತಂಡದಿಂದ ಭಕ್ತಿಗೀತೆಗಳ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಸತ್ಸಂಗದ ಉಪಾಧ್ಯಕ್ಷ ಪಿ. ನಾರಾಯಣಪ್ಪ, ವಿ.ಎನ್. ವೆಂಕಟೇಶ್, ನಾಗರಾಜಶೆಟ್ಟಿ, ಎನ್. ನಾರಾಯಣಸ್ವಾಮಿ, ಮುನಿರಾಜು, ಗೋವಿಂದರಾಜು, ವಿ.ಎನ್. ರಮೇಶ್, ಶಿವಣ್ಣ, ಮುನಿನಾರಾಯಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT