<p><strong>ಆನೇಕಲ್:</strong>ತಾಲ್ಲೂಕಿನ ಅತ್ತಿಬೆಲೆಯಲ್ಲಿ ಮದಗದಮ್ಮ ದೇವಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ದೇಗುಲದ ಜೀರ್ಣೋದ್ಧಾರದ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.</p>.<p>ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಗೋಪೂಜೆ, ಗಣಪತಿ ಹೋಮ, ವಾಸ್ತುಹೋಮ, ಮೂರ್ತಿ ಹೋಮ, ಮೃತ್ಯುಂಜಯ ಹೋಮ, ಪರಿವಾರ ದೇವತಾ ಹೋಮ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳನ್ನು ನಡೆಸಲಾಯಿತು.</p>.<p>ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಚಿತ್ರದುರ್ಗ ಮಠದ ಬಸವ ಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ರಾಜಾಪುರ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಕೇಂದ್ರದಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಪಾಂಡಿಚೇರಿ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸಾಯಿಸರವಣ ಕುಮಾರ್, ಎಸ್.ಸಿ, ಎಸ್.ಟಿ ಆಯೋಗದ ಮಾಜಿ ಅಧ್ಯಕ್ಷ ಎ. ಮುನಿಯಪ್ಪ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ಶಂಕರಪ್ಪ, ಮುಖಂಡರಾದ ಟಿ.ವಿ. ಬಾಬು, ಕೆ.ವಿ. ಶಿವಪ್ಪ, ಪುರಸಭಾ ಅಧ್ಯಕ್ಷೆ ಚಂದನಾ ಮಿಲನ್ಕುಮಾರ್, ಸದಸ್ಯರಾದ ನಾರಾಯಣಸ್ವಾಮಿ, ಮುನಿರಾಜು, ಮಣಿ, ಡಿ.ಎಂ. ಮುನಿಯಪ್ಪ, ರಾಜಶೇಖರ್, ಆನಂದಪ್ಪ, ರಾಮಚಂದ್ರ, ಎ.ಎನ್. ಶೇಖರ್, ಶಶಿಧರ್, ಚಂದ್ರಶೇಖರ್, ದೇವರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong>ತಾಲ್ಲೂಕಿನ ಅತ್ತಿಬೆಲೆಯಲ್ಲಿ ಮದಗದಮ್ಮ ದೇವಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ದೇಗುಲದ ಜೀರ್ಣೋದ್ಧಾರದ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.</p>.<p>ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಗೋಪೂಜೆ, ಗಣಪತಿ ಹೋಮ, ವಾಸ್ತುಹೋಮ, ಮೂರ್ತಿ ಹೋಮ, ಮೃತ್ಯುಂಜಯ ಹೋಮ, ಪರಿವಾರ ದೇವತಾ ಹೋಮ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳನ್ನು ನಡೆಸಲಾಯಿತು.</p>.<p>ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಚಿತ್ರದುರ್ಗ ಮಠದ ಬಸವ ಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ರಾಜಾಪುರ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಕೇಂದ್ರದಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಪಾಂಡಿಚೇರಿ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸಾಯಿಸರವಣ ಕುಮಾರ್, ಎಸ್.ಸಿ, ಎಸ್.ಟಿ ಆಯೋಗದ ಮಾಜಿ ಅಧ್ಯಕ್ಷ ಎ. ಮುನಿಯಪ್ಪ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ಶಂಕರಪ್ಪ, ಮುಖಂಡರಾದ ಟಿ.ವಿ. ಬಾಬು, ಕೆ.ವಿ. ಶಿವಪ್ಪ, ಪುರಸಭಾ ಅಧ್ಯಕ್ಷೆ ಚಂದನಾ ಮಿಲನ್ಕುಮಾರ್, ಸದಸ್ಯರಾದ ನಾರಾಯಣಸ್ವಾಮಿ, ಮುನಿರಾಜು, ಮಣಿ, ಡಿ.ಎಂ. ಮುನಿಯಪ್ಪ, ರಾಜಶೇಖರ್, ಆನಂದಪ್ಪ, ರಾಮಚಂದ್ರ, ಎ.ಎನ್. ಶೇಖರ್, ಶಶಿಧರ್, ಚಂದ್ರಶೇಖರ್, ದೇವರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>