<p><strong>ಕನಸವಾಡಿ (ದೊಡ್ಡಬಳ್ಳಾಪುರ): </strong>ಸಂಸ್ಕೃತಿಯ ಮೂಲವಾದ ಜಾನಪದ ಕಲೆಗಳು ಇಂದು ಪಾಶ್ಚಿಮಾತ್ಯ ಕಲೆಗಳ ಪ್ರಭಾವದಿಂದ ನೇಪಥ್ಯಕ್ಕೆ ಸರಿಯುತ್ತಿವೆ. ಜಾನಪದ ಪರಂಪರೆಗಳನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಉತ್ತಮ ವೇದಿಕೆಗಳ ಅಗತ್ಯವಿದೆ ಎಂದು ಹಿರಿಯ ಬಿಜೆಪಿ ಮುಖಂಡ ಸಿ.ಡಿ.ಸತ್ಯನಾರಾಯಣಗೌಡ ಹೇಳಿದರು.</p>.<p>ಅವರು ತಾಲ್ಲೂಕಿನ ಕನಸವಾಡಿಯಲ್ಲಿ, ಪ್ರತಿಭಾ ಜಾನಪದ ಕಲಾ ವೃಂದ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಸಾಂಸ್ಕೃತಿಕ ಕಲಾ ಮಹೋತ್ಸವ-2021 ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜಾನಪದ ಕಲೆ ಎಲ್ಲಾ ಸಂಸ್ಕೃತಿಗಳ ತಾಯಿ ಬೇರಾಗಿದೆ.ಜನಪದ ಕಲೆಯನ್ನುಉಳಿಸಿ ಬೆಳೆಸುವ ದಿಸೆಯಲ್ಲಿ ಸರ್ಕಾರ ಜನಪದ ಹಾಗೂ ಇತರ ಕಲಾ ಪ್ರಕಾರಗಳನ್ನು ಪುನಶ್ಚೇತನಗೊಳಿಸುವ ಕಾರ್ಯಕ್ರಮಗಳಿಗೆ ಸರ್ಕಾರ ಹೆಚ್ಚಿನ ನೆರವು ನೀಡಬೇಕಿದೆ. ಸಂಘಟನೆಗಳು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು<br />ತಿಳಿಸಿದರು.</p>.<p>ಆದಿಶಕ್ತಿ ಅಮ್ಮನಗುಡ್ಡ ಕ್ಷೇತ್ರದ ಪೀಠಾಧ್ಯಕ್ಷ ನರಸಿಂಹಮೂರ್ತಿ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ,ಗ್ರಾಮೀಣ ಭಾಗದಲ್ಲಿ ಇಂದಿಗೂ ಅಸಂಖ್ಯಾತ ಕಲಾವಿದರು ಎಲೆ ಮರೆಯ ಕಾಯಂತಿದ್ದಾರೆ. ಇಂತಹವರನ್ನು ಗುರುತಿಸಿ ಮುಖ್ಯವಾಹಿನಿಗೆ ತರಬೇಕಿದೆ.ಸಂಘಟನೆಗಳೊಂದಿಗೆ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದರು. ಸಮಾರಂಭದಲ್ಲಿ ಹಿರಿಯ ಕಲಾವಿದರಿಗೆ ರಂಗಸಿರಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯೆ ಚನ್ನಮ್ಮರಾಮಲಿಂಗಯ್ಯ, ಶನಿಮಹಾತ್ಮ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಕೆ.ವಿ.ಪ್ರಕಾಶ್,ಪ್ರತಿಭಾ ಜಾನಪದ ಕಲಾ ವೃಂದದ ಅಧ್ಯಕ್ಷ ಎಸ್.ಬಿ.ಹನುಮಂತರಾಯಪ್ಪ,ಪ್ರಧಾನ ಕಾರ್ಯದರ್ಶಿ ಎಚ್.ರತ್ನಮ್ಮ, ಕಲಾವಿದ ವಿ.ರಾಮಚಂದ್ರ ಇದ್ದರು.</p>.<p>ಕಲಾಮಹೋತ್ಸವದ ಅಂಗವಾಗಿ, ವಿವಿಧ ಕಲಾತಂಡಗಳು ಹಾಗೂ ಕಲಾವಿದರಿಂದ ಸುಗಮ ಸಂಗೀತ, ಸಮೂಹ ನೃತ್ಯ, ಜಾನಪದ ನೃತ್ಯ, ತತ್ವಪದ ಗಾಯನ ಸೋಮನ ಕುಣಿತ, ವೀರಗಾಸೆ, ಡೊಳ್ಳುಕುಣಿತ ಪ್ರದರ್ಶನಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಸವಾಡಿ (ದೊಡ್ಡಬಳ್ಳಾಪುರ): </strong>ಸಂಸ್ಕೃತಿಯ ಮೂಲವಾದ ಜಾನಪದ ಕಲೆಗಳು ಇಂದು ಪಾಶ್ಚಿಮಾತ್ಯ ಕಲೆಗಳ ಪ್ರಭಾವದಿಂದ ನೇಪಥ್ಯಕ್ಕೆ ಸರಿಯುತ್ತಿವೆ. ಜಾನಪದ ಪರಂಪರೆಗಳನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಉತ್ತಮ ವೇದಿಕೆಗಳ ಅಗತ್ಯವಿದೆ ಎಂದು ಹಿರಿಯ ಬಿಜೆಪಿ ಮುಖಂಡ ಸಿ.ಡಿ.ಸತ್ಯನಾರಾಯಣಗೌಡ ಹೇಳಿದರು.</p>.<p>ಅವರು ತಾಲ್ಲೂಕಿನ ಕನಸವಾಡಿಯಲ್ಲಿ, ಪ್ರತಿಭಾ ಜಾನಪದ ಕಲಾ ವೃಂದ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಸಾಂಸ್ಕೃತಿಕ ಕಲಾ ಮಹೋತ್ಸವ-2021 ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜಾನಪದ ಕಲೆ ಎಲ್ಲಾ ಸಂಸ್ಕೃತಿಗಳ ತಾಯಿ ಬೇರಾಗಿದೆ.ಜನಪದ ಕಲೆಯನ್ನುಉಳಿಸಿ ಬೆಳೆಸುವ ದಿಸೆಯಲ್ಲಿ ಸರ್ಕಾರ ಜನಪದ ಹಾಗೂ ಇತರ ಕಲಾ ಪ್ರಕಾರಗಳನ್ನು ಪುನಶ್ಚೇತನಗೊಳಿಸುವ ಕಾರ್ಯಕ್ರಮಗಳಿಗೆ ಸರ್ಕಾರ ಹೆಚ್ಚಿನ ನೆರವು ನೀಡಬೇಕಿದೆ. ಸಂಘಟನೆಗಳು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು<br />ತಿಳಿಸಿದರು.</p>.<p>ಆದಿಶಕ್ತಿ ಅಮ್ಮನಗುಡ್ಡ ಕ್ಷೇತ್ರದ ಪೀಠಾಧ್ಯಕ್ಷ ನರಸಿಂಹಮೂರ್ತಿ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ,ಗ್ರಾಮೀಣ ಭಾಗದಲ್ಲಿ ಇಂದಿಗೂ ಅಸಂಖ್ಯಾತ ಕಲಾವಿದರು ಎಲೆ ಮರೆಯ ಕಾಯಂತಿದ್ದಾರೆ. ಇಂತಹವರನ್ನು ಗುರುತಿಸಿ ಮುಖ್ಯವಾಹಿನಿಗೆ ತರಬೇಕಿದೆ.ಸಂಘಟನೆಗಳೊಂದಿಗೆ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದರು. ಸಮಾರಂಭದಲ್ಲಿ ಹಿರಿಯ ಕಲಾವಿದರಿಗೆ ರಂಗಸಿರಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯೆ ಚನ್ನಮ್ಮರಾಮಲಿಂಗಯ್ಯ, ಶನಿಮಹಾತ್ಮ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಕೆ.ವಿ.ಪ್ರಕಾಶ್,ಪ್ರತಿಭಾ ಜಾನಪದ ಕಲಾ ವೃಂದದ ಅಧ್ಯಕ್ಷ ಎಸ್.ಬಿ.ಹನುಮಂತರಾಯಪ್ಪ,ಪ್ರಧಾನ ಕಾರ್ಯದರ್ಶಿ ಎಚ್.ರತ್ನಮ್ಮ, ಕಲಾವಿದ ವಿ.ರಾಮಚಂದ್ರ ಇದ್ದರು.</p>.<p>ಕಲಾಮಹೋತ್ಸವದ ಅಂಗವಾಗಿ, ವಿವಿಧ ಕಲಾತಂಡಗಳು ಹಾಗೂ ಕಲಾವಿದರಿಂದ ಸುಗಮ ಸಂಗೀತ, ಸಮೂಹ ನೃತ್ಯ, ಜಾನಪದ ನೃತ್ಯ, ತತ್ವಪದ ಗಾಯನ ಸೋಮನ ಕುಣಿತ, ವೀರಗಾಸೆ, ಡೊಳ್ಳುಕುಣಿತ ಪ್ರದರ್ಶನಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>