<p><strong>ದೇವನಹಳ್ಳಿ</strong>: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿ ನಿಲ್ದಾಣದಲ್ಲಿ ಮಂಗಳವಾರ ತಡರಾತ್ರಿ ಕೆಎಸ್ಟಿಡಿಸಿ ಟ್ಯಾಕ್ಸಿ ಚಾಲಕನನ್ನು ಮತ್ತೊಬ್ಬ ಟ್ಯಾಕ್ಸಿ ಚಾಲಕ ಕೊಲೆ ಮಾಡಿದ್ದಾನೆ. </p>.<p>ಮೃತನನ್ನು ದೇವನಹಳ್ಳಿಯ ರಾಮುಹಳ್ಳಿ ನಿವಾಸಿ ಲೋಕೇಶ್ (35) ಎಂದು ಗುರುತಿಸಲಾಗಿದೆ. ಕನಕಪುರ ನಿವಾಸಿ, ಕೆಎಸ್ಟಿಡಿಸಿ ಟ್ಯಾಕ್ಸಿ ಚಾಲಕ ಮುತ್ತುರಾಜು ಕೊಲೆ ಆರೋಪಿ. ಇಬ್ಬರೂ ಸ್ನೇಹಿತರಾಗಿದ್ದು, ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸ್ನೇಹಿತ ಲೋಕೇಶ್ ಅವರಿಂದ ಮುತ್ತುರಾಜ್ ಹಣ ಪಡೆದಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ ಟ್ಯಾಕ್ಸಿಯಲ್ಲಿ ಕುಳಿತು ಸಾಲ ಮರುಪಾವತಿ ಕುರಿತು ಮಾತನಾಡುತ್ತಿದ್ದರು. ಈ ವೇಳೆ ಮಾತು ವಿಕೋಪಕ್ಕೆ ತಿರುಗಿ ಮುತ್ತುರಾಜ್ ತಮ್ಮ ಕೈಯಲ್ಲಿದ್ದ ಕೀ ಬಂಚ್ನಲ್ಲಿದ್ದ ಚಿಕ್ಕ ಚಾಕುವಿನಿಂದ ಲೋಕೇಶ್ ಎದೆಯ ಭಾಗಕ್ಕೆ ಜೋರಾಗಿ ಚುಚ್ಚಿದ್ದಾರೆ. ರಕ್ತಸ್ರಾವದಿಂದ ಲೋಕೇಶ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ಮುತ್ತುರಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣ ಠಾಣೆಯಲ್ಲಿ ದೂರು ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿ ನಿಲ್ದಾಣದಲ್ಲಿ ಮಂಗಳವಾರ ತಡರಾತ್ರಿ ಕೆಎಸ್ಟಿಡಿಸಿ ಟ್ಯಾಕ್ಸಿ ಚಾಲಕನನ್ನು ಮತ್ತೊಬ್ಬ ಟ್ಯಾಕ್ಸಿ ಚಾಲಕ ಕೊಲೆ ಮಾಡಿದ್ದಾನೆ. </p>.<p>ಮೃತನನ್ನು ದೇವನಹಳ್ಳಿಯ ರಾಮುಹಳ್ಳಿ ನಿವಾಸಿ ಲೋಕೇಶ್ (35) ಎಂದು ಗುರುತಿಸಲಾಗಿದೆ. ಕನಕಪುರ ನಿವಾಸಿ, ಕೆಎಸ್ಟಿಡಿಸಿ ಟ್ಯಾಕ್ಸಿ ಚಾಲಕ ಮುತ್ತುರಾಜು ಕೊಲೆ ಆರೋಪಿ. ಇಬ್ಬರೂ ಸ್ನೇಹಿತರಾಗಿದ್ದು, ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸ್ನೇಹಿತ ಲೋಕೇಶ್ ಅವರಿಂದ ಮುತ್ತುರಾಜ್ ಹಣ ಪಡೆದಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ ಟ್ಯಾಕ್ಸಿಯಲ್ಲಿ ಕುಳಿತು ಸಾಲ ಮರುಪಾವತಿ ಕುರಿತು ಮಾತನಾಡುತ್ತಿದ್ದರು. ಈ ವೇಳೆ ಮಾತು ವಿಕೋಪಕ್ಕೆ ತಿರುಗಿ ಮುತ್ತುರಾಜ್ ತಮ್ಮ ಕೈಯಲ್ಲಿದ್ದ ಕೀ ಬಂಚ್ನಲ್ಲಿದ್ದ ಚಿಕ್ಕ ಚಾಕುವಿನಿಂದ ಲೋಕೇಶ್ ಎದೆಯ ಭಾಗಕ್ಕೆ ಜೋರಾಗಿ ಚುಚ್ಚಿದ್ದಾರೆ. ರಕ್ತಸ್ರಾವದಿಂದ ಲೋಕೇಶ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ಮುತ್ತುರಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣ ಠಾಣೆಯಲ್ಲಿ ದೂರು ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>