<p><strong>ವಿಜಯಪುರ:</strong>ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಮೂರನೇ ಅಲೆಯ ಸ್ವರೂಪ ಗಂಭೀರವಾಗುತ್ತಿದೆ. ಎರಡೂ ರಾಜ್ಯಗಳ ಗಡಿಗಳಲ್ಲಿ ಸರ್ಕಾರ ಕಟ್ಟೆಚ್ಚರವಹಿಸಿದ್ದು, ಜನರು ಮೈಮರೆಯದಂತೆ ಜಾಗ್ರತೆವಹಿಸಬೇಕು. ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರತಿಯೊಬ್ಬರೂ ನಿರ್ಭಿತಿಯಿಂದ ಲಸಿಕೆ ಪಡೆದುಕೊಳ್ಳುವ ಮೂಲಕ ಕೋವಿಡ್ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಲಸಿಕೆಯಿಂದ ಅಡ್ಡ ಪರಿಣಾಮಗಳಾಗುತ್ತವೆ ಎನ್ನುವ ಭಯ ಇನ್ನೂ ಸ್ವಲ್ಪಮಟ್ಟಿಗೆ ಜನರಲ್ಲಿದೆ. ಅದನ್ನು ಹೋಗಲಾಡಿಸಬೇಕಾಗಿದೆ ಎಂದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ಯಾಂಸುಂದರ್ ಮಾತನಾಡಿ, ಇಂದು 350 ಮಂದಿಗೆ ಲಸಿಕೆ ಬಂದಿದೆ. ನಮೂನೆ-3ರನ್ನು ಹೊರತುಪಡಿಸಿ 18 ವರ್ಷ ಮೇಲ್ಪಟ್ಟವರು ಯಾರೇ ಬಂದರೂ ಲಸಿಕೆ ಹಾಕಲಾಗುತ್ತಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ನೂರಾರು ಮಂದಿ ಸಾಲಿನಲ್ಲಿ ನಿಂತು ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆದುಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಾ.ಉದಯ್ ಕುಮಾರ್, ಫಾರ್ಮಾಸಿಸ್ಟ್ ಕುಮುದಾ, ಪವಿತ್ರಾ, ಕಲಾವತಿ, ಸುಮಾ, ರಿಜ್ವಾನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಮೂರನೇ ಅಲೆಯ ಸ್ವರೂಪ ಗಂಭೀರವಾಗುತ್ತಿದೆ. ಎರಡೂ ರಾಜ್ಯಗಳ ಗಡಿಗಳಲ್ಲಿ ಸರ್ಕಾರ ಕಟ್ಟೆಚ್ಚರವಹಿಸಿದ್ದು, ಜನರು ಮೈಮರೆಯದಂತೆ ಜಾಗ್ರತೆವಹಿಸಬೇಕು. ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರತಿಯೊಬ್ಬರೂ ನಿರ್ಭಿತಿಯಿಂದ ಲಸಿಕೆ ಪಡೆದುಕೊಳ್ಳುವ ಮೂಲಕ ಕೋವಿಡ್ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಲಸಿಕೆಯಿಂದ ಅಡ್ಡ ಪರಿಣಾಮಗಳಾಗುತ್ತವೆ ಎನ್ನುವ ಭಯ ಇನ್ನೂ ಸ್ವಲ್ಪಮಟ್ಟಿಗೆ ಜನರಲ್ಲಿದೆ. ಅದನ್ನು ಹೋಗಲಾಡಿಸಬೇಕಾಗಿದೆ ಎಂದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ಯಾಂಸುಂದರ್ ಮಾತನಾಡಿ, ಇಂದು 350 ಮಂದಿಗೆ ಲಸಿಕೆ ಬಂದಿದೆ. ನಮೂನೆ-3ರನ್ನು ಹೊರತುಪಡಿಸಿ 18 ವರ್ಷ ಮೇಲ್ಪಟ್ಟವರು ಯಾರೇ ಬಂದರೂ ಲಸಿಕೆ ಹಾಕಲಾಗುತ್ತಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ನೂರಾರು ಮಂದಿ ಸಾಲಿನಲ್ಲಿ ನಿಂತು ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆದುಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಾ.ಉದಯ್ ಕುಮಾರ್, ಫಾರ್ಮಾಸಿಸ್ಟ್ ಕುಮುದಾ, ಪವಿತ್ರಾ, ಕಲಾವತಿ, ಸುಮಾ, ರಿಜ್ವಾನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>