ದೊಡ್ಡಬಳ್ಳಾಪುರ: ನಗರದ ಅರುಳುಮಲ್ಲಿಗೆ ಬಾಗಿಲು ತೇರಿನಬೀದಿಯಲ್ಲಿನ ಆಂಜನೇಯಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹುಂಡಿಯ ಕಾಣಿಕೆ ಹಣ ಕಳವು ಮಾಡಲಾಗಿದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇತ್ತೀಚೆಗಷ್ಟೆ ಜೀರ್ಣೊದ್ದಾರ ಮಾಡಲಾಗಿದ್ದ ದೇವಾಲಯದ ಬಾಗಿಲಿಗೆ ಅಳವಡಿಸಲಾಗಿದ್ದ ಚಿಲಕವನ್ನು ಹೊಡೆದು ದುಷ್ಕರ್ಮಿಗಳು ದೇವಾಲಯದಲ್ಲಿದ್ದ ಎರಡು ಹುಂಡಿಯಲ್ಲಿನ ಕಾಣಿಕೆಯನ್ನು ದೋಚಿದ್ದಾರೆ.
ಕೈಗಾರಿಕೆಗಳಿಗೆ ಹೋಗುವ ಕಾರ್ಮಿಕರು, ಇಡೀ ರಾತ್ರಿ ನೇಕಾರರ ಕಾರ್ಮಿಕರು ಸೇರಿದಂತೆ ಜನ ಸಂಚಾರ ಹೆಚ್ಚಾಗಿರುವ ತೇರಿನಬೀದಿಯ ದೇಗುಲದಲ್ಲಿ ಹುಂಡಿ ಹಣ ಕಳವು ಮಾಡಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ.
ಆರು ತಿಂಗಳಿಂದ ಗ್ರಾಮೀಣ ಪ್ರದೇಶ ದೇವಾಲಯಗಳಲ್ಲಿ ಹುಂಡಿಗಳ ಕಳವು ನಡೆಯುತ್ತಿದ್ದವು. ಈಗ ನಗರದ ಪ್ರದೇಶದಲ್ಲಿನ ದೇವಾಲಯಗಳಲ್ಲೂ ಅದರಲ್ಲೂ ಹೆಚ್ಚು ಜನ ಸಂಚಾರ ಇರುವ ದೇವಾಲಯಗಳಲ್ಲೂ ಹುಂಡಿ ಕಳವು ನಡೆದಿರುವುದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.