ಸವಿತಾ ವಾಪಸ್ ಬಾರದಿದ್ದಾಗ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ನಾಗವೇಣಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಫೆ. 5 ರಂದು ದೇವನಹಳ್ಳಿಯ ಬಸ್ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದೆವು. ಆಕೆಯನ್ನು ವಿಚಾರಣೆ ನಡೆಸಿದಾಗ ಇಲ್ಲಿ ಕಳ್ಳತನವಾಗಿರುವ ಚಿನ್ನಾಭರಣವೂ ಸೇರಿದಂತೆ 120 ಗ್ರಾಂ ನಷ್ಟು ಚಿನ್ನಾಭರಣ ಪತ್ತೆಯಾಗಿದೆ. ಆಕೆಯಿಂದ 12 ಸಾವಿರ ನಗದು, ಮೊಬೈಲ್, ವಶಪಡಿಸಿಕೊಂಡು, ಆಕೆಯನ್ನು ದೇವನಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಸ್.ಮಲ್ಲಿಕಾರ್ಜುನ್ ತಿಳಿಸಿದರು.