ನಗರದ ಸೋಮೇಶ್ವರ ಬಡಾವಣೆಯಲ್ಲಿ ಸರ್ಕಾರಿ ಉದ್ಯೋಗಸ್ಥರು, ವ್ಯಾಪಾರಸ್ಥರು ಹೆಚ್ಚಾಗಿ ವಾಸವಾಗಿರುವ ಪ್ರದೇಶವಾಗಿದೆ. ಈ ಭಾಗದಲ್ಲಿ ಮನೆ ಕಳವು, ಸರಗಳವು ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರು ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿಲ್ಲ. ಹೀಗಾಗಿ ಸೋಮೇಶ್ವರ ಬಡಾವಣೆಯಲ್ಲಿ ಕಳವು ಪ್ರಕರಣಗಳು ಹೆಚ್ಚಾಗಿವೆ ಎಂದು ಸ್ಥಳೀಯ ನಿವಾಸಿ ವಡ್ಡರಹಳ್ಳಿ ರವಿ ದೂರಿದ್ದಾರೆ.