ಆನೇಕಲ್: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕೂಲಿಕಾರ್ಮಿಕರಿಗೆ, ರೈತರಿಗೆ, ಬಡವರಿಗೆ ಪೂರೈಕೆ ಮಾಡುವ ಸಲುವಾಗಿ ಪ್ಯಾಕಿಂಗ್ ಮಾಡಲು ಸರ್ಜಾಪುರ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕಕ್ಕೆ ನೀಡಲಾಗಿತ್ತು. ಆದರೆ, ರಾಜಕೀಯ ಕಾರಣಗಳಿಗಾಗಿ ಸಂಸದ ಡಿ.ಕೆ ಸುರೇಶ್ ಮತ್ತು ಶಾಸಕ ಬಿ.ಶಿವಣ್ಣ ಸರ್ಕಾರದ ಸಕ್ಕರೆ ವಂಚಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೊರವರ್ತುಲ ರಸ್ತೆ ಪ್ರಾಧಿಕಾರದ ಅಧ್ಯಕ್ಷ ಸಿ.ಮುನಿರಾಜು ಸ್ಪಷ್ಟನೆ ನೀಡಿದರು.