ಬ್ರಹ್ಮರಥೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದ ಅರ್ಚಕರು ಧಾರ್ಮಿಕ ಆಚರಣೆಳನ್ನು ಪೂರ್ಣಗೊಳಿಸಿದ ನಂತರ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಭಕ್ತರು ಹೊತ್ತು ತಂದು ಅಲಂಕೃತ ರಥದಲ್ಲಿ ಕುಳ್ಳರಿಸಲಾಗಿತ್ತು. ಪ್ರಾಂಗಣದಲ್ಲಿ ರಥವನ್ನು ಎತ್ತುಗಳ ಮೂಲಕ ಎಳೆಸಲಾಯಿತು. ಪ್ರಧಾನ ಅರ್ಚಕ ರಾಮಚಂದ್ರಭಟ್ ಅವರು ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು.