ದ್ರಾಕ್ಷಿ ಬೆಳೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತದೆ. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಹಾರೋಹಳ್ಳಿ, ಇರಿಗೇನಹಳ್ಳಿ, ಬಿಜ್ಜವಾರ, ಮುದುಗುರ್ಕಿ, ವೆಂಕಟಗಿರಿಕೋಟೆ, ಗೊಡ್ಲುಮುದ್ದೇನಹಳ್ಳಿಪುರ, ಚನ್ನರಾಯಪಟ್ಟಣ ಹೋಬಳಿ ಬೀಡಿಗಾನಹಳ್ಳಿ, ದಿನ್ನೂರು, ಮಂಡಿಬೆಲೆ ಮುಂತಾದ ಕಡೆ ರೈತರು ಹೆಚ್ಚಿನ ಪ್ರಮಾಣದಲ್ಲಿ ದ್ರಾಕ್ಷಿ ಬೆಳೆಯುತ್ತಿದ್ದಾರೆ ಎಂದು ರೈತ ವೆಂಕಟೇಶ್ ಮಾಹಿತಿ ನೀಡಿದರು.