ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ| ತಿಪ್ಪಗಾನಹಳ್ಳಿ ಕೆರೆಯಲ್ಲಿ ಮುಳುಗಿ ಮೂವರ ಸಾವು

Last Updated 26 ಮೇ 2020, 3:33 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಗೌರಿಬಿದನೂರು-ದೊಡ್ಡಬಳ್ಳಾಪುರ ರಸ್ತೆಯ ತಿಪ್ಪಗಾನಹಳ್ಳಿ ಕೆರೆಗೆ ಈಜಲು ತೆರಳಿದ್ದ ಮೂವರು ಯುವಕರು ಸೋಮವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತರನ್ನು ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿಗಳಾದ ರಾಜು(19), ಚಂದ್ರು (20), ನವೀನ್ (24) ಗುರುತಿಸಲಾಗಿದೆ. ನವೀನ್ ಎಂಬುವವರ ಹುಟ್ಟುಹಬ್ಬದ ನಿಮಿತ್ತ ತಾಲ್ಲೂಕಿನ ಘಾಟಿ ದೇವಾಲಯಕ್ಕೆ 8 ಮಂದಿ ವಾಹನದಲ್ಲಿ ಆಗಮಿಸಿದ್ದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಪ್ರವೇಶ ನೀಡದ್ದರಿಂದ ದೇವರಿಗೆ ನಮಸ್ಕರಿಸಿ, ಸಮೀಪದಲ್ಲಿನ ತಿಪ್ಪಗಾನಹಳ್ಳಿ ಕೆರೆ ಬಳಿ ಈಜಲು ತೆರಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಮೃತ ದೇಹಗಳ ಶೋಧ ಕಾರ್ಯ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT