ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ರಾಜಗೋಪಾಲ್ ಮಾತನಾಡಿ, ಎತ್ತಿನಹೊಳೆ ಯೋಜನೆ ಕಾಮಗಾರಿ ವೀಕ್ಷಣೆಗೆ ಕೇವಲ ಕಾಂಗ್ರೆಸ್ ಮುಖಂಡರು ಮಾತ್ರ ಹೋಗಿಲ್ಲ. ಎಲ್ಲ ಪಕ್ಷಗಳ ಮುಖಂಡರು, ರೈತ ಸಂಘದ ಪ್ರತಿನಿಧಿಗಳು ವೀಕ್ಷಣೆ ಮಾಡಿದ್ದಾರೆ. ಯೋಜನೆ ಬಗ್ಗೆ ಕಿಂಚಿತ್ತೂ ಮಾಹಿತಿ ಇಲ್ಲದ ಅವರಿಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಅರಿವು ಇಲ್ಲ. ರೈತರ ಪರಿಸ್ಥಿತಿಯೂ ಗೊತ್ತಿಲ್ಲ’ಎಂದು ಟೀಕಿಸಿದರು.