<p><strong>ದೊಡ್ಡಬಳ್ಳಾಪುರ: </strong>ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯರಸ್ತೆ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಆಗಸ್ಟ್ 3ರಂದು ಬೆಳಿಗ್ಗೆ 10ರಿಂದ ಆಗಸ್ಟ್4 ಬೆಳಿಗ್ಗೆ 5ರವರೆಗೆ ಬಂದ್ ಮಾಡಲಾಗುವುದು ಎಂದು ರೈಲ್ವೆ ಇಲಾಖೆ ಸಾರ್ವಜನಿಕ ಪ್ರಕಟಣೆ ತಿಳಿಸಿದೆ.</p>.<p>ಈ ರೈಲ್ವೆ ಗೇಟ್ ಮೂಲಕ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿದಿನ ನೂರಾರು ವಾಹನಗಳು ಹೋಗುತ್ತವೆ. ಗೇಟ್ ಬಳಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 20 ಗಂಟೆಗಳ ಕಾಲ ನಿರಂತರವಾಗಿ ಕೆಲಸ ನಡೆಯುತ್ತಿದೆ.</p>.<p>ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದಂತೆ ಈ ರಸ್ತೆಗೆ ಬದಲಿಯಾಗಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಈ ಭಾಗದ ಗ್ರಾಮಗಳಿಗೆ ವಾಹನಗಳು ಹೋಗಲು ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿನ ಗೊಲ್ಲಹಳ್ಳಿ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ ರಸ್ತೆ ಮೂಲಕ ಘಾಟಿ ಕ್ಷೇತ್ರ ಸೇರಿದಂತೆ ಈ ಭಾಗದ ಗ್ರಾಮಗಳಿಗೆ ಹೋಗಬಹುದಾಗಿದೆ. ಇದಲ್ಲದೆ ಬೆಂಗಳೂರು ಸೇರಿಂದಂತೆ ವಿವಿಧ ಕಡೆಗಳಿಂದ ಬರುವವರು ಗೌರಿಬಿದನೂರು ರಾಜ್ಯ ಹೆದ್ದಾರಿ ಮಾಕಳಿ ರೈಲ್ವೆ ನಿಲ್ದಾಣದ ರಸ್ತೆ ಮೂಲಕ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗಲು ಉತ್ತಮ ರಸ್ತೆ ಸೌಲಭ್ಯ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯರಸ್ತೆ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಆಗಸ್ಟ್ 3ರಂದು ಬೆಳಿಗ್ಗೆ 10ರಿಂದ ಆಗಸ್ಟ್4 ಬೆಳಿಗ್ಗೆ 5ರವರೆಗೆ ಬಂದ್ ಮಾಡಲಾಗುವುದು ಎಂದು ರೈಲ್ವೆ ಇಲಾಖೆ ಸಾರ್ವಜನಿಕ ಪ್ರಕಟಣೆ ತಿಳಿಸಿದೆ.</p>.<p>ಈ ರೈಲ್ವೆ ಗೇಟ್ ಮೂಲಕ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿದಿನ ನೂರಾರು ವಾಹನಗಳು ಹೋಗುತ್ತವೆ. ಗೇಟ್ ಬಳಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 20 ಗಂಟೆಗಳ ಕಾಲ ನಿರಂತರವಾಗಿ ಕೆಲಸ ನಡೆಯುತ್ತಿದೆ.</p>.<p>ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದಂತೆ ಈ ರಸ್ತೆಗೆ ಬದಲಿಯಾಗಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಈ ಭಾಗದ ಗ್ರಾಮಗಳಿಗೆ ವಾಹನಗಳು ಹೋಗಲು ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿನ ಗೊಲ್ಲಹಳ್ಳಿ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ ರಸ್ತೆ ಮೂಲಕ ಘಾಟಿ ಕ್ಷೇತ್ರ ಸೇರಿದಂತೆ ಈ ಭಾಗದ ಗ್ರಾಮಗಳಿಗೆ ಹೋಗಬಹುದಾಗಿದೆ. ಇದಲ್ಲದೆ ಬೆಂಗಳೂರು ಸೇರಿಂದಂತೆ ವಿವಿಧ ಕಡೆಗಳಿಂದ ಬರುವವರು ಗೌರಿಬಿದನೂರು ರಾಜ್ಯ ಹೆದ್ದಾರಿ ಮಾಕಳಿ ರೈಲ್ವೆ ನಿಲ್ದಾಣದ ರಸ್ತೆ ಮೂಲಕ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗಲು ಉತ್ತಮ ರಸ್ತೆ ಸೌಲಭ್ಯ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>